- Advertisement -
- Advertisement -
ಬೆಂಗಳೂರು: ಮಾಗಡಿ ರಸ್ತೆಯ ಫುಡ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟವಾಗಿದ್ದು, ಇಬ್ಬರು ಸಜೀವ ದಹನವಾಗಿರುವ ಘಟನೆ ವರದಿಯಾಗಿದೆ. ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಇನ್ನೂ ಐವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.
ಬಿಹಾರ ಮೂಲದ ಮನಿಷ್(21) ಮತ್ತು ಸೌರಭ್(21) ಎಂಬ ಕಾರ್ಮಿಕರು ಮೃತಪಟ್ಟಿದ್ದಾರೆ. ಒಬ್ಬರು ಮಹಿಳೆ ಸೇರಿದಂತೆ ಇನ್ನೂ ಐವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.
ಸಚಿನ್ ಮತ್ತು ವಿಜಯ್ ಮೆಹ್ತಾ ಮಾಲೀಕತ್ವದಲ್ಲಿ ಈ ಕಾರ್ಖಾನೆ ನಡೆಸಲಾಗುತ್ತಿದೆ. ಬಾಯ್ಲರ್ ಸೋಟದಿಂದಾಗಿ ಅಕ್ಕಪಕ್ಕದ ಮನೆಯ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪಾಲುದಾರ ಸಚಿನ್ ಹಾಗೂ ಧನಲಕ್ಷ್ಮಿ, ಶಾಂತಿ ಎಂಬುವವರು ಗಾಯಗೊಂಡಿದ್ದಾರೆ. ಚಿಕಿತ್ಸೆಗಾಗಿ ಇವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಡಿಸಿಪಿ ಸಂಜೀವ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾಗಡಿ ರಸ್ತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
- Advertisement -