Thursday, July 30, 2026
spot_imgspot_img
spot_imgspot_img

ಬಂಗಾಳ ಕೊಲ್ಲಿಯಲ್ಲಿ ಗುಲಾಬ್ ಸೈಕ್ಲೋನ್; ಇಂದಿನಿಂದ ರಾಜ್ಯದಲ್ಲಿ 3 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಎಚ್ಚರಿಕೆ

- Advertisement -
- Advertisement -
driving

ನವದೆಹಲಿ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಉಂಟಾದ ಗುಲಾಬ್​ ಚಂಡಮಾರುತ ನಿನ್ನೆ ಪಶ್ಚಿಮ ಬಂಗಾಳ, ಆಂಧ್ರಪ್ರದೇಶ, ಮತ್ತು ಒಡಿಶಾ ಕರಾವಳಿ ಪ್ರದೇಶಗಳಿಗೆ ಅಪ್ಪಳಿಸಿದೆ.

ಮುಂದಿನ 12 ಗಂಟೆಗಳ ಕಾಲ ಚಂಡಮಾರುತದ ಪ್ರಭಾವ ಹೆಚ್ಚಾಗಿರಲಿದ್ದು ವಿಪರೀತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.. ಗುಲಾಬ್​ ಚಂಡಮಾರುತದ ವೇಗ ಗಂಟೆಗೆ 70ರಿಂದ 80 ಕಿ.ಮೀ ಇರಲಿದ್ದು, ಗರಿಷ್ಠ 90 ಕಿ.ಮೀಗೆ ಏರಿಕೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇನ್ನು ಸೈಕ್ಲೋನ್ ಪರಿಣಾಮ ಕರ್ನಾಟಕದ ಮೇಲೂ ಪರಿಣಾಮ ಬೀರುತ್ತಿದೆ. ಈಗಾಗಲೇ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮಾತ್ರವಲ್ಲ ಇನ್ನೂ ಮೂರು ದಿನ ರಾಜ್ಯದಲ್ಲಿ ಮಳೆ ಸುರಿಯಲಿದೆ. ಸೆಪ್ಟೆಂಬರ್ 25 ರಿಂದ ಸೆಪ್ಟೆಂಬರ್ 28ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -

Related news

error: Content is protected !!