- Advertisement -
- Advertisement -
ಬಂಟ್ವಾಳ : ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ವಾಹನವೊಂದನ್ನು ಖಚಿತ ಮಾಹಿತಿಯನ್ವಯ ಬಂಟ್ವಾಳ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಬಂಧಿಸಿ, ಎರಡು ಜಾನುವಾರುಗಳನ್ನು ರಕ್ಷಿಸಲಾಗಿದೆ.
ಆರೋಪಿ ಕಾರಾಜೆಯ ಪ್ರದೀಪ್ ಸಿಕ್ವೇರ ಚಲಾಯಿಸುತ್ತಿದ್ದ ಪಿಕಪ್ ನಲ್ಲಿ ಎರಡು ಜಾನುವಾರುಗಳಿದ್ದು, ಯಾವುದೇ ದಾಖಲೆಗಳಿಲ್ಲದೆ ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಈ ಘಟನೆ ನಡೆದಿದ್ದು, ಬಿ.ಸಿ.ರೋಡ್ ನ ನಾರಾಯಣಗುರು ವೃತ್ತದ ಸಮೀಪ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರ ವಿಶೇಷ ಪತ್ತೆ ತಂಡ ಕಾರ್ಯಾಚರಣೆ ನಡೆಸಿದೆ. ಈ ಸಂಬಂಧ ಕಾರಾಜೆಯ ಪ್ರದೀಪ್ ಸಿಕ್ವೇರ ಎಂಬಾತನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಬಂಟ್ವಾಳ ಪೊಲೀಸ್ ಉಪಾಧೀಕ್ಷಕರ ಸೂಚನೆಯಂತೆ ಉಪನಿರೀಕ್ಷಕರಾದ ರಾಮಕೃಷ್ಣ, ಎಚ್.ಸಿ.ಗಳಾದ ಮನೋಹರ, ಜಯಕುಮಾರ್, ಪಿಸಿಗಳಾದ ಜಮೀರ್ ಮತ್ತು ರಂಗನಾಥ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
- Advertisement -