Sunday, April 28, 2024
spot_imgspot_img
spot_imgspot_img

ಬಂಟ್ವಾಳ: ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿ ಸಾವು; ಸೂಕ್ತ ತನಿಖೆಗೆ ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಆಗ್ರಹ!

- Advertisement -G L Acharya panikkar
- Advertisement -
driving

ಬಂಟ್ವಾಳ: ಸಜೀಪ ಮೂಡ ಬೆಂಕ್ಯೆಯ ಎಂಬಲ್ಲಿನ ಪದವಿಪೂರ್ವ ಕಾಲೇಜಿನ ಹಿಂಬದಿಯಲ್ಲಿ ಮನೆ ಮಾಡಿ ವಾಸಿಸುತ್ತಿರುವ ಹರೀಶ (40) ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಸಾವಿನ ಶಂಕೆಯನ್ನು ವ್ಯಕ್ತಪಡಿಸಿ ಪೊಲೀಸರು ಪ್ರಕರಣವನ್ನು ಮುಚ್ಚುತ್ತಿದ್ದಾರೆ.

ಮೇಲ್ನೋಟಕ್ಕೆ ಮೃತದೇಹದಲ್ಲಿ ಗಾಯದ ಗುರುತುಗಳಿದ್ದು ಇದು ಹತ್ಯೆ ಎಂದು ಕಾಣುತ್ತಿದೆ ಆದರೂ ಇದನ್ನು ಮುಚ್ಚಿಹಾಕಲು ಕಾಣದ ಕೈಗಳು ಯತ್ನಿಸುತ್ತಿದ್ದು ಸಾವಿನ ಸಂಪೂರ್ಣ ತನಿಖೆ ಆಗಬೇಕೆಂದು ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಸಮಿತಿ ಆಗ್ರಹಿಸಿದೆ.

ಹರೀಶ ಮ್ಯೆಯಲ್ಲಿ ಗಾಯಗಳು ಕಂಡುಬಂದಿರುವುದರಿಂದ ಅನ್ಯ ಕೋಮಿನ ಯುವಕರು ಈ ಹಿಂದೆ ಅವನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.ಅಂತೆಯೇ ಹಳೇ ವೈಷಮ್ಯವನ್ನಿಟ್ಟುಕೊಂಡ ತಂಡವೊಂದು ಮೂರು ದಿನಗಳಿಂದ ಹಲ್ಲೆ ಮಾಡಲು ಕಾಯುತ್ತಿರುವುದಾಗಿ ಸಾರ್ವಜನಿಕರು ಮಾತಾಡಿಕೊಳ್ಳುತ್ತಿದ್ದಾರೆ. ಆದ್ದರಿಂದ ಹರೀಶನ ಹತ್ಯೆಯನ್ನು ಪೊಲೀಸರು ಸರಿಯಾಗಿ ತನಿಖೆ ಮಾಡಿ ತಪ್ಪಿತಸ್ಥರನ್ನು ಬಂಧಿಸಿ ಶಿಕ್ಷೆ ಕೊಡಬೇಕೆಂದು ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಆಗ್ರಹಿಸಿದೆ.

- Advertisement -

Related news

error: Content is protected !!