Monday, May 20, 2024
spot_imgspot_img
spot_imgspot_img

ಬಂಟ್ವಾಳ: ಅಪಘಾತದ ವಿಚಾರವಾಗಿ ಇತ್ತಂಡಗಳ ನಡುವೆ ಜಗಳ – ಹಲ್ಲೆ; ನಾಲ್ವರು ಪೊಲೀಸ್ ವಶಕ್ಕೆ

- Advertisement -G L Acharya panikkar
- Advertisement -
vtv vitla
vtv vitla

ಬಂಟ್ವಾಳ: ಎರಡು ವಾಹನಗಳ ನಡುವೆ ಡಿಕ್ಕಿ ವಿಚಾರಕ್ಕೆ ಸಂಬಂಧಿಸಿದಂತೆ ಇತ್ತಂಡಗಳ ನಡುವೆ ಮಾತಿಗೆ ಮಾತು ಬೆಳೆದು ಹೊಯಿಕೈ ನಡೆದ ಘಟನೆ ನಡೆದು ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಬಂಟ್ವಾಳ ಬಾರೆಕಾಡು ನಿವಾಸಿ ರ‍್ಶಾದ್, ಬಾರೆಕಾಡು ಶಾಹಿಲ್ ಹಾಗೂ ಬಂಟ್ವಾಳ ನಿವಾಸಿಗಳಾದ ಧನುಷ್ ಆಚರ‍್ಯ ಹಾಗೂ ಕರ‍್ತನ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಿ ಕಸಬಾ ಗ್ರಾಮದ ತುಂಬ್ಯಾ ಜಂಕ್ಷನ್ ಬಳಿ ಬೈಕ್ ಮತ್ತು ಆಟೋ ರಿಕ್ಷಾಕ್ಕೆ ಅಪಘಾತ ಉಂಟಾದ ಕಾರಣಕ್ಕೆ ಸ್ಥಳಕ್ಕೆ ಬಂದ ಸ್ಥಳೀಯ ಯುವಕರು ಮತ್ತು ಆಟೋ ರಿಕ್ಷಾ ಸಂಬಂಧಿಗಳು ಒಬ್ಬರಿಗೊಬ್ಬರು ಗಲಾಟೆ ಮಾಡಿಕೊಂಡಿದ್ದಾರೆ. ಮಾತಿಗೆ ಮಾತು ಬೆಳೆದು ಹಲ್ಲೆ ನಡೆಸಿದ್ದಾರೆ. ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ ಹಾಗೂ ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಪ್ರಕರಣದಲ್ಲಿ ಭಾಗಿಯಾದ ನಾಲ್ಕು ಜನರನ್ನು ಪೊಲೀಸರು ವಶಕ್ಕೆ ಪಡೆದು ಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

vtv vitla
vtv vitla
vtv vitla
- Advertisement -

Related news

error: Content is protected !!