Friday, May 3, 2024
spot_imgspot_img
spot_imgspot_img

ಬಂಟ್ವಾಳ: ಇಂದು ನಡೆಯುವ “ಗ್ರಾಮ ವಿಕಾಸ ಯಾತ್ರೆ- ಶಾಸಕರ ನಡಿಗೆ ಗ್ರಾಮಗಳ ಕಡೆಗೆ” ಕಾರ್ಯಕ್ರಮದಲ್ಲಿ ಅಣ್ಣಾಮಲೈ ಭಾಗಿ

- Advertisement -G L Acharya panikkar
- Advertisement -
vtv vitla

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ನೇತೃತ್ವದಲ್ಲಿ 12 ದಿನಗಳ ಕಾಲ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಂಚರಿಸಿದ ಗ್ರಾಮ ವಿಕಾಸ ಯಾತ್ರೆ- ಶಾಸಕರ ನಡಿಗೆ ಗ್ರಾಮಗಳ ಕಡೆಗೆ ಪಾದಯಾತ್ರೆಯ ಸಮಾರೋಪ ಬಸ್ತಿಪಡ್ಡುವಿನಲ್ಲಿ ಸಂಜೆ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಪೊಲೀಸ್ ಎಸ್ಪಿ ಅಣ್ಣಾಮಲೈ ಭಾಗವಹಿಸಲಿದ್ದಾರೆ.

ಇಂದು ಬೆಳಿಗ್ಗೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಅಮ್ಮನವರ ದರ್ಶನ ಪಡೆದರು.

ಮಧ್ಯಾಹ್ನ 2 ರ ಬಳಿಕ ಕೈಕಂಬ ಜಂಕ್ಷನ್ ನಿಂದ ಬಂಟ್ವಾಳ ಬಸ್ತಿಪಡುವಿನವರೆಗೆ ಬೃಹತ್ ಪಾದಯಾತ್ರೆ ನಡೆಯಲಿದ್ದು, ಮಾಜಿಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸೇರಿದಂತೆ ರಾಜ್ಯ ಮಟ್ಟದ ಹಲವು ನಾಯಕರು ಈ ಪಾದಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಸಂಜೆ 4 ಗಂಟೆಗೆ ಬಸ್ತಿಪಡುವಿನ ವಿಶಾಲವಾದ ಮೈದಾನದಲ್ಲಿ ಸಮಾರೋಪ ಕಾರ್ಯಕ್ರಮ ನಡೆಯಲಿದ್ದು, ಸುಮಾರು 25 ಸಾವಿರ ಕಾರ್ಯಕರ್ತರು ಸಮಾರೋಪ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ ಎಂದು ಪಾದಯಾತ್ರೆ ಸಂಚಾಲಕ ದೇವದಾಸ್ ಶೆಟ್ಟಿ ತಿಳಿಸಿದ್ದಾರೆ.

ಪೊಲೀಸ್ ಅಧಿಕಾರಿಯಾಗಿ ಸೂಪರ್ ಕಾಪ್ ಎಂದು ಖ್ಯಾತಿಯಾಗಿದ್ದ ಅಣ್ಣಾಮಲೈ ಈಗ ರಾಜಕಾರಣಿಯಾಗಿ ಬದಲಾಗಿದ್ದು, ಈಗಾಗಲೇ ಹಲವು ವಿಚಾರಗಳಿಂದ ಸುದ್ದಿಯಲ್ಲಿದ್ದಾರೆ. ಅವರ ಆಗಮನ ಬಿಜೆಪಿ ಕಾರ್ಯಕರ್ತರಲ್ಲಿ ಹುರುಪು ಹೆಚ್ಚಿಸಿದೆ.

- Advertisement -

Related news

error: Content is protected !!