- Advertisement -
- Advertisement -
ಬಂಟ್ವಾಳ: ಗೂಡ್ಸ್ ಟೆಂಪೋ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಅ.25 ರಂದು ಬಂಟ್ವಾಳದ ಕೊಯಿಲ ಪೇಟೆಯ ಸಮೀಪದ ಕುದ್ಮಾಣಿ ಕಿರುಸೇತುವೆ ಮೇಲೆ ನಡೆದಿದೆ.
ಮೃತ ಬೈಕ್ ಸವಾರನನ್ನು ಮಂಗಳೂರು ತೆಂಕ ಮಿಜಾರು ನಿವಾಸಿ ದಿನೇಶ್ ಎಂದು ಗುರುತಿಸಲಾಗಿದೆ.
ಗೂಡ್ಸ್ ಟೆಂಪೋ ಮತ್ತು ಪಲ್ಸರ್ ಬೈಕ್ ನಡುವೆ ಈ ಅಪಘಾತ ಸಂಭವಿಸಿದ್ದು, ಮೂಡುಬಿದ್ರೆ ಕಡೆಯಿಂದ ಬಂಟ್ವಾಳ ಕಡೆಗೆ ಹೋಗುತ್ತಿದ್ದ ವೇಳೆ, ಬಿ.ಸಿ.ರೋಡಿನಿಂದ ಮೂಡುಬಿದ್ರೆ ಗೆ ಹೋಗುತ್ತಿದ್ದ ಬೀಡಿ ಸಂಸ್ಥೆಯೊಂದರ ಗೂಡ್ಸ್ ಟೆಂಪೋ ಢಿಕ್ಕಿಯಾಗಿದೆ. ಬೈಕ್ ಸವಾರನ ತಲೆ ರಸ್ತೆಗೆ ಬಡಿದು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಎನ್ನಲಾಗಿದ್ದು, ಮೆಲ್ಕಾರ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -