Thursday, April 25, 2024
spot_imgspot_img
spot_imgspot_img

ಬಂಟ್ವಾಳ: ಕಾರು ಡಿಕ್ಕಿ; ದ್ವಿಚಕ್ರ ವಾಹನ ಸವಾರ ಗಂಭೀರ, ಸಹಸವಾರ ಮೃತ್ಯು..!

- Advertisement -G L Acharya panikkar
- Advertisement -

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮವಾಗಿ ಓರ್ವ ಮೃತಪಟ್ಟು ಇನ್ನೋರ್ವ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ಸಮೀಪದ ರಾಯಿ ಎಂಬಲ್ಲಿ ನಡೆದಿದೆ.

ಬಂಟ್ವಾಳ ಬೈಪಾಸ್ ನಿವಾಸಿ ಇಲೆಕ್ಟ್ರಿಕ್ ಗುತ್ತಿಗೆದಾರ ಚಂದ್ರಶೇಖರ ಮೃತಪಟ್ಟ ವ್ಯಕ್ತಿ. ಬಂಟ್ವಾಳ ನಿವಾಸಿ ಇಡ್ಲಿ ಯೋಗೀಶ್ ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಎಂದು ತಿಳಿದು ಬಂದಿದೆ.

ದ್ವಿಚಕ್ರ ವಾಹನವು ಬಂಟ್ವಾಳ ಕಡೆ ಬರುತ್ತಿದ್ದಾಗ ಸುಮಾರು 11 ಗಂಟೆ ವೇಳೆಗೆ ರಾಯಿ ಎಂಬಲ್ಲಿ ಹಿಂಬದಿಯಿಂದ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ದ್ವಿಚಕ್ರ ದಲ್ಲಿ ಹಿಂಬದಿಯ ಸವಾರನಾಗಿದ್ದ ಚಂದ್ರಶೇಖರ ಅವರು ರಸ್ತೆಗೆ ಎಸೆಯಲ್ಪಟ್ಟು ಸಾವನ್ನಪ್ಪಿದ್ದಾರೆ. ಚಾಲಕ ಯೋಗೀಶ್ ತಲೆಗೆ ಗಂಭೀರ ಗಾಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರು ಚಾಲಕನ ಅತಿವೇಗದ ಹಾಗೂ ಅಜಾಗರೂಕತೆಯ ಚಾಲನೆಯೆ ಘಟನೆಗೆ ಕಾರಣವೆನ್ನಲಾಗಿದೆ.

ಮೆಲ್ಕಾರ್ ಟ್ರಾಫಿಕ್ ಎಸ್.ಐ.ಮೂರ್ತಿ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

- Advertisement -

Related news

error: Content is protected !!