Friday, May 10, 2024
spot_imgspot_img
spot_imgspot_img

ಬಂಟ್ವಾಳ: ಕಾರು ಡಿಕ್ಕಿ; ಪಾದಾಚಾರಿ ಮೃತ್ಯು..!

- Advertisement -G L Acharya panikkar
- Advertisement -

ಬಂಟ್ವಾಳ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಮುಡಿಪು ಜಂಕ್ಷನ್‌ನಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಬಂಟ್ವಾಳ ಕರೋಪಾಡಿ ನಿವಾಸಿ ಸಿದ್ದಿಖ್ (48) ಎಂದು ಗುರುತಿಸಲಾಗಿದೆ.

ಗಲ್ಫ್ ರಾಷ್ಟ್ರದಲ್ಲಿ ಉದ್ಯೋಗದಲ್ಲಿದ್ದ ಅವರು ಎರಡು ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದರು. ಸದ್ಯ ದೇರಳಕಟ್ಟೆ ಫ್ಲಾಟ್ ನಲ್ಲಿ ನೆಲೆಸಿರುವ ಸಿದ್ದೀಖ್ ಶುಕ್ರವಾರದ ಜುಮಾ ನಮಾಝ್ ಅನ್ನು ಕರೋಪಾಡಿ ಮಸೀದಿಯಲ್ಲಿ ನಡೆಸಿದ್ದರು. ಅಲ್ಲಿಂದ ವಾಪಸ್ಸು ದೇರಳಕಟ್ಟೆಗೆ ಬರುವ ದಾರಿ ಮಧ್ಯೆ ಮುಡಿಪು ಜಂಕ್ಷನ್‌ನಲ್ಲಿ ಇಳಿದು, ಎಟಿಎಂ ಹಣ ಡ್ರಾ ಮಾಡಿದ್ದಾರೆ.

ಅಲ್ಲಿಂದ ವಾಪಸ್ಸು ರಸ್ತೆ ದಾಟಿ ಬಸ್ಸನ್ನೇರಲು ಹೊರಟಾಗ ಮಂಗಳೂರು ಕಡೆಗೆ ಚಲಿಸುತ್ತಿದ್ದ ಸೂರಜ್ ನಾಥ್ ಎಂಬವರು ಚಲಾಯಿಸುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಪರಿಣಾಮ ತಲೆ ಭಾಗಕ್ಕೆ ಗಂಭೀರ ಗಾಯಗೊಂಡ ಸಿದ್ದೀಖ್ ಅವರನ್ನು ನಾಟೆಕಲ್ ಕಣಚೂರು ಆಸ್ಪತ್ರೆಗೆ ದಾಖಲಿಸುವ ದಾರಿಮಧ್ಯೆ ಸಾವನ್ನಪ್ಪಿದ್ದಾರೆ. ಸಿದ್ದೀಖ್ ಮುಂದಿನ ವಾರದಲ್ಲಿ ಮತ್ತೆ ಉದ್ಯೋಗ ಮಿತ್ತ ಗಲ್ಫ್ ರಾಷ್ಟ್ರಕ್ಕೆ ಮರಳುವವರಿದ್ದರು. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

2022ರ ಡಿ.27 ರಂದು ಪಜೀರು ಸೇನೆರೆಬೈಲು ನಿವಾಸಿ ಕಾರ್ತಿಕ್ (12) ಎಂಬ ಬಾಲಕ ಮೃತಪಟ್ಟಿದ್ದ. ಮುಡಿಪು ಜ್ಯೂನಿಯರ್ ಕಾಲೇಜು ಎದುರುಗಡೆ ರಸ್ತೆ ದಾಟುವ ಸಂದರ್ಭ ಅಪಘಾತ ಸಂಭವಿಸಿತ್ತು. ಇದೀಗ ಮತ್ತೆ ಅದೇ ಸ್ಥಳದಲ್ಲಿ ಅಪಘಾತ ಸಂಭವಿಸಿದೆ. ಮುಡಿಪು ಭಾಗದಲ್ಲಿ ಫುಟ್‍ಪಾತ್ ಅನ್ನು ಅಂಗಡಿ ಮಾಲೀಕರು ಅಕ್ರಮಿಸಿದ್ದು, ಹೀಗಾಗಿ ಪಾದಚಾರಿಗಳು ರಸ್ತೆ ಮಧ್ಯೆ ನಡೆದುಕೊಂಡು ಹೋಗುವಂತಹ ಸ್ಥಿತಿಯಿದ್ದು, ಇದರಿಂದಾಗಿ ಅಪಘಾತಗಳು ನಿರಂತರವಾಗಿ ಸಂಭವಿಸುತ್ತಿವೆ ಅನ್ನುವ ಆರೋಪ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ.

- Advertisement -

Related news

error: Content is protected !!