ಬಂಟ್ವಾಳ: ಇಡೀ ದೇಶವೇ ಆಯುಧ ಪೂಜೆಯ ಸಂಭ್ರಮದಿಂದ ಇದ್ದರೆ, ಯಾರೋ ದುಷ್ಕರ್ಮಿಗಳು ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಪೋಲೀಸ್ ಠಾಣೆ ವ್ಯಾಪ್ತಿಯ ನೈನಾಡು ಎಂಬಲ್ಲಿ ರಸ್ತೆಯ ಮೇಲೆ ಬಳಪದಲ್ಲಿ ಬರೆದಿರುವ ಬರಹ ವ್ಯಾಪಕ ಚರ್ಚೆಗೆ ಗ್ರಾಮವಾಗಿದೆ.
“ಚಡ್ಡಿಗಳೆ ಎಚ್ಚರ ಪಿ.ಎಫ್.ಐ.ನಾವು ಮರಳಿ ಬರುತ್ತೇವೆ” ಎಂದು ರಸ್ತೆಯಲ್ಲಿ ಕಿಡಿಗೇಡಿಗಳು RSSಗೆ ವಿಚಿತ್ರವಾಗಿ ಎಚ್ಚರಿಕೆ ನೀಡಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಪಿಲತಾಬೆಟ್ಟು ಗ್ರಾಮದ ಸ್ನೇಹಗಿರಿ ಎಂಬಲ್ಲಿ ಕೋಮು ಸಂಘರ್ಷ ಹೆಚ್ಚಿಸಲು ರಸ್ತೆಯಲ್ಲಿ ಬಹಿರಂಗ ಬೆದರಿಕೆ ಹಾಕಿದ ಬಗ್ಗೆ ವರದಿಯಾಗಿದೆ. ಚಡ್ಡಿಗಳೆ ಎಚ್ಚರ ನಾವು ಮರಳಿ ಬರುತ್ತೇವೆ ಎಂದು ರಸ್ತೆಯಲ್ಲಿ ಬರೆದುಕೊಂಡಿದ್ದು,ರೆ ಸ್ಥಳೀಯರು ಪುಂಜಾಲಕಟ್ಟೆ ಠಾಣೆಗೆ ಈ ಬಗ್ಗೆ ಮಾಹಿತಿ ನೀಡಿ ತಕ್ಷಣಕ್ಕೆ ಕ್ರಮ ಜರುಗಿಸಿ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸುತ್ತಾರೆ.
ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಕೇಂದ್ರ ಸರಕಾರದ ಎ.ಎನ್.ಐ.ದಾಳಿಯ ಹಿನ್ನೆಲೆಯಲ್ಲಿ ಪಿ.ಎಫ್.ಐ.ಸಂಘಟನೆ ಚಡ್ಡಿಗಳೆ ಎಚ್ಚರ ಎಂಬ ಸಂದೇಶವನ್ನು ಗ್ರಾಮಾಂತರ ಭಾಗದ ರಸ್ತೆಯಲ್ಲಿ ಬರೆದ ಬರಹ ಇದೀಗ ಪೋಲಿಸರನ್ನು ನಿದ್ದೆಗೆಡಿಸುವಂತೆ ಮಾಡಿದೆ.