Saturday, May 4, 2024
spot_imgspot_img
spot_imgspot_img

ಬಂಟ್ವಾಳ: ಕುಡಿಯುವ ನೀರಿನ ಸಮಸ್ಯೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ನಳಿನ್ ಕುಮಾರ್

- Advertisement -G L Acharya panikkar
- Advertisement -

ಬಂಟ್ವಾಳ: ಬಿಸಿರೋಡು ಅಡ್ಡಹೊಳೆವರೆಗಿನ ಚತುಷ್ಪತ ಕಾಮಗಾರಿ ಅವಾಂತರ ಐದು ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ‌ ಉದ್ಭವಿಸಿದ್ದು, ತಕ್ಷಣ ಸಮಸ್ಯೆಗೆ ಪರಿಹಾರ ಮಾಡದಿದ್ದರೆ ಅಧಿಕಾರಿಗಳನ್ನು ಬದಲಾವಣೆ ಮಾಡಬೇಕಾದೀತು ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಕುಡಿಯುವ ನೀರಿನ‌ ಪೈಪ್ ಗಳಿಗೆ ಹಾನಿಯಾಗಿದ್ದು, ಸುಮಾರು ಐದು ಗ್ರಾಮಗಳಿಗೆ ಕಳೆದ ಕೆಲವು ದಿನಗಳಿಂದ ಕುಡಿಯುವ ನೀರಿನ‌ ಸಮಸ್ಯೆ ಉದ್ಬವವಾದ ಹಿನ್ನೆಲೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗುರುವಾರ ಶಾಸಕರ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನೀಡಿ ಎಚ್ಚರಿಕೆ ನೀಡಿದರು.

ಕುಡಿಯುವ ನೀರಿನ ಸಮಸ್ಯೆ ಜೊತೆ ಭೂ ಒತ್ತುವರಿ, ಗುಡ್ಡ ಅಗೆತ, ಮೆಸ್ಕಾಂ ಸಮಸ್ಯೆಗಳು ಬರದಂತೆ ಎಚ್ಚರಿಕೆ ವಹಿಸಬೇಕು, ಜೊತೆಗೆ ಪ್ರತಿ 15 ದಿನಗಳಿಗೊಮ್ಮೆ ಶಾಸಕರ ಜೊತೆ ಅಧಿಕಾರಿಗಳು ಹಾಗೂ ಗುತ್ತಿಗೆ ವಹಿಸಿಕೊಂಡ ಕಂಪೆನಿಯ ಸಿಬ್ಬಂದಿಗಳು ಸಭೆ ನಡೆಸಬೇಕು.ಗ್ರಾ.ಪಂ.ವ್ಯಾಪ್ತಿಯ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಗ್ರಾಮ ಮಟ್ಟದ ಅಧಿಕಾರಿಗಳ ಜೊತೆಯೂ ಸಭೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

Related news

error: Content is protected !!