Tuesday, April 30, 2024
spot_imgspot_img
spot_imgspot_img

ಬಂಟ್ವಾಳ: ಕುದ್ರೆಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಪುಟಾಣಿ ಮಕ್ಕಳ ಸಾಮೂಹಿಕ ಹುಟ್ಟುಹಬ್ಬ ಹಾಗೂ ಇಂಟರ್ಲಾಕ್ ಕಾಮಗಾರಿ ಉದ್ಘಾಟನೆ

- Advertisement -G L Acharya panikkar
- Advertisement -

ಬಂಟ್ವಾಳ: ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಅಂಗನವಾಡಿ ಕೇಂದ್ರ ಹಾಗೂ ಬಾಲವಿಕಾಸ ಸಮಿತಿ, ಸ್ತ್ರೀಶಕ್ತಿ ಗಳ ಗುಂಪು ಇದರ ಆಶ್ರಯದಲ್ಲಿ ಪುಟಾಣಿ ಮಕ್ಕಳ ಸಾಮೂಹಿಕ ಹುಟ್ಟುಹಬ್ಬ ಹಾಗೂ ಅಂಗನವಾಡಿ ಕೇಂದ್ರದ ಹೊರಗಿನ ಅಂಗಣಕ್ಕೆ ಅಳವಡಿಸಿದ ಇಂಟರ್ಲಾಕ್ ಕಾಮಗಾರಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಬಾಲವಿಕಾಸ ಸಮಿತಿಯ ಮಾಜಿ ಅಧ್ಯಕ್ಷೆ ಪುಷ್ಪ ಬಿ. ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು. ಬಂಟ್ವಾಳ ತಾಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಯೋಜನಾಧಿಕಾರಿ ಗಾಯತ್ರಿ ಕಂಬಳಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ದಿನೇಶ್ ಅಮ್ಟೂರು, ಬಾಳ್ತಿಲ ಗ್ರಾಮ ಪಂಚಾಯತ್ ಸದಸ್ಯ ಬೀ.ಕೆ ಅಣ್ಣು ಪೂಜಾರಿ, ಲತಿಷ್ ಕುರ್ಮನ್ , ಶೋಭಾ , ಮಹಿಳಾ ಮತ್ತು ಮಕ್ಕಳ ಕಲ್ಯಾಣ ಶಿಶು ಅಭಿವೃದ್ಧಿಇಲಾಖೆ ಹಿರಿಯ ಮೇಲ್ವಿಚಾರಕರಾದ ಶಾಲಿನಿ ಹಾಗೂ ಮೇಲ್ವಿಚಾರಕರಾದ ಶೋಭಾ,

ಕಲ್ಲಡ್ಕ ರೈತರ ಸೇವಾ ಸಹಕಾರಿ ಬ್ಯಾಂಕ್ ನಿರ್ದೇಶಕ ಲೋಕನಂದ ಏಳ್ತಿಮಾರ್, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಸುಂದರ ಸಾಲಿಯಾನ್ , ಕುದ್ರೆ ಬೆಟ್ಟು ಶಾಲಾ ಸಹಶಿಕ್ಷಕಿ ಮಮತಾ, ಶಾಲಾ ಮೇಲುಸ್ತುವಾರಿ ಸಮಿತಿಯ ಮಾಜಿ ಅಧ್ಯಕ್ಷ ರಮೇಶ್ ಕುದ್ರೆಬೆಟ್ಟು, ಬಾಲ ವಿಕಾಸ ಸಮಿತಿ ಅಧ್ಯಕ್ಷ ಶಿಲ್ಪ ಬೈಲು, ಆಶಾ ಕಾರ್ಯಕರ್ತೆ ಸುಜಾತ ಎಂ, ಕೊರಗಪ್ಪ ಪಂಡಿತ್, ಶ್ರೀ ಮಣಿಕಂಠ ಯುವಶಕ್ತಿ ಅಧ್ಯಕ್ಷ ಮಾಧವ ಸಾಲಿಯಾನ್, ಸಂತೋಷ್ ಕುಮಾರ್ ಬೋಲ್ಪೊಡಿ ,ಉಷಾ, ಕವಿತಾ ,ಶೋಭಾ ,ಸುಲತ ,ಸುಮನ, ನಳಿನಿ ಹಾಗೂ ಸ್ತ್ರೀಶಕ್ತಿ ಗುಂಪಿನ ಸದಸ್ಯರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಅಂಗನವಾಡಿ ಪುಟಾಣಿಗಳ ತಾಯಂದಿರು ವಿವಿಧ ಕೊಡುಗೆಗಳನ್ನು ನೀಡಿದರು. ಅಂಗನವಾಡಿ ಶಿಕ್ಷಕಿ ಸುರೇಖಾ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿ,ಅಂಗನವಾಡಿ ಸಹಾಯಕಿ ಜಯಂತಿ ವಂದಿಸಿದರು .

- Advertisement -

Related news

error: Content is protected !!