Saturday, June 28, 2025
spot_imgspot_img
spot_imgspot_img

ಬಂಟ್ವಾಳ: ಗೋಕಳ್ಳತನ ; ಗೋ ಮಾಂಸ ಸಹಿತ ಇಬ್ಬರ ಬಂಧನ

- Advertisement -
- Advertisement -

ಬಂಟ್ವಾಳ: ಕಳ್ಳತನ ಮಾಡಿದ ದನಗಳನ್ನು ಕಡಿದು ಮಾರಾಟ ಮಾಡುತ್ತಿದ್ದ ಕಸಾಯಿಖಾನೆಗೆ ದಾಳಿ ನಡೆಸಿದ ಪೊಲೀಸರು ದನದ ಮಾಂಸ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಗೋಳ್ತಮಜಲು ಎಂಬಲ್ಲಿ ನಡೆದಿದೆ.

ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಗೋಳ್ತಮಜಲು ನಿವಾಸಿಗಳಾದ ಮಹಮ್ಮದ್ ಇಸ್ಮಾಯಿಲ್ ಮತ್ತು ಸಾಬಿತ್ ಹುಸೈನ್ ಎಂಬವರನ್ನು ಬಂಧಿಸಲಾಗಿದೆ. ಗೋಳ್ತಮಜಲು ಮಹಮ್ಮದ್ ಎಂಬವರ ಮನೆಯಲ್ಲಿ ಕದ್ದು ತಂದ ದನಗಳನ್ನು ವಧೆ ಮಾಡಿದ ಬಳಿಕ, ಮಾಂಸಗಳನ್ನು ಮಾರಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಸ್ಥಳೀಯರಿಂದ ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು.

ಮಾಹಿತಿ ಮೇರೆಗೆ ಎಸ್ ಐ.ಅವಿನಾಶ್ ನೇತೃತ್ವದ ನಗರ ಠಾಣಾ ಪೊಲೀಸರ ತಂಡ ಮುಂಜಾವಿನ ವೇಳೆ ದಾಳಿ ನಡೆಸಿ, ಮಾಂಸ ಸಹಿತ ಆರೋಪಿಗಳು ಬಂಧಿಸಿದ್ದಾರೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!