Monday, April 29, 2024
spot_imgspot_img
spot_imgspot_img

ಬಂಟ್ವಾಳ : ಚಾಲನೆಯಲ್ಲಿರುವಾಗಲೇ ಚಾಲಕನಿಗೆ ಮೂರ್ಛೆ ರೋಗ; ವಾಹನಗಳಿಗೆ ಡಿಕ್ಕಿ ಹೊಡೆದು ಪೆಟ್ರೋಲ್ ಬಂಕ್ ಗೆ ನುಗ್ಗಿದ ಲಾರಿ

- Advertisement -G L Acharya panikkar
- Advertisement -

ಬಂಟ್ವಾಳ : ಲಾರಿ ಚಾಲನೆಯಲ್ಲಿರುವಾಗಲೇ ಚಾಲಕನೋರ್ವನಿಗೆ ಮೂರ್ಛೆ ರೋಗ ಬಾಧಿಸಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ ಹೊಡೆದು ಬಳಿಕ ಪೆಟ್ರೋಲ್ ಬಂಕ್ ಗೆ ನುಗ್ಗಿ ಕಾರೊಂದಕ್ಕೆ ಡಿಕ್ಕಿ ಹೊಡೆದು ನಿಂತ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಬಿಸಿರೋಡ್ ನಲ್ಲಿ ನಡೆದಿದೆ.

ಲಾರಿ ಮಂಗಳೂರು ಕಡೆಯಿಂದ ಹಾಸನಕ್ಕೆ ಹೋಗುತ್ತಿದ್ದ ವೇಳೆ ಬಿಸಿರೋಡ್ ನ ಪೆಟ್ರೋಲ್ ಪಂಪ್ ಬಳಿ ಈ ಅವಘಡ ಸಂಭವಿಸಿದೆ. ಚಾಲಕನಿಗೆ ಮೂರ್ಚೆ ರೋಗ ಬಾಧಿಸಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಲಾರಿ ಚಾಲಕನನ್ನು ಲಕ್ಷಣ್ ಎಂದು ಗುರುತಿಸಲಾಗಿದೆ. ಈತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದ್ದು , ಚೇತರಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಪೆಟ್ರೋಲ್ ಪಂಪ್ ನಲ್ಲಿ ಪೆಟ್ರೋಲ್ ಹಾಕುತ್ತಿದ್ದ ರಿಟ್ಸ್ ಕಾರಿಗೆ ಡಿಕ್ಕಿ ಹೊಡೆದ ಲಾರಿ ಬಳಿಕ ಬೈಕ್ ಹೀಗೆ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಬಳಿಕ ಲಾರಿ ಪೆಟ್ರೋಲ್ ಪಂಪ್‌ನಲ್ಲಿ ನಿಲ್ಲಿಸಲಾಗಿದ್ದ ನ್ಯಾನೋ ಕಾರಿಗೆ ಡಿಕ್ಕಿ ಹೊಡೆದು ನಿಂತಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ . ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!