ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ, ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಕುರ್ನಾಡು ಬಂಟ್ವಾಳ ಇದರ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟ ೨೦೨೨-೨೩ ರಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮೂಡಂಬೈಲು ಶಾಲೆ ವಿದ್ಯಾರ್ಥಿನಿ ಪ್ರತೀಕ್ಷಾ ಮೂರು ಸ್ಪರ್ಧೆಗಳಲ್ಲಿ ವಿಜೇತರಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಮೂಡಂಬೈಲು ಶಾಲೆ ವಿದ್ಯಾರ್ಥಿನಿ ಪ್ರತೀಕ್ಷಾರವರು ಮೂರು ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಗಳಿಸಿದ್ದಾರೆ. ಇವರು ೪೦೦ಮೀ ಓಟದಲ್ಲಿ ದ್ವಿತೀಯ, ಲಾಂಗ್ ಜಂಪ್ನಲ್ಲಿ ತೃತೀಯ, ಹೈಜಂಪ್ನಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಮಂಗಳ ಸ್ಟೇಡಿಯಂ ಮಂಗಳೂರಲ್ಲಿ ನಡೆಯುವ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಈಕೆ ಪುಣಚ ಗ್ರಾಮದ ಬಾಲಕೃಷ್ಣ ಎಂ., ಶಶಿಕಲಾ ದಂಪತಿ ಪುತ್ರಿ.
ಭಾಗವಹಿಸಿದ ಮೂರೂ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿ ಶಾಲೆಗೆ ಕೀರ್ತಿ ತಂದ ಪ್ರತೀಕ್ಷಾಳಿಗೆ ಎಲ್ಲರ ಪರವಾಗಿ ಅಭಿನಂದನೆಗಳನ್ನು ಶಾಲಾ ಶಿಕ್ಷಕ ವರ್ಗ, ಆಡಳಿತ ಮಂಡಳಿ, ವಿದ್ಯಾರ್ಥಿಗಳು ಸಲ್ಲಿಸಿದೆ.