Monday, April 29, 2024
spot_imgspot_img
spot_imgspot_img

ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹಲವು ಸಾಧಕರಿಗೆ ಸನ್ಮಾನ

- Advertisement -G L Acharya panikkar
- Advertisement -

ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಮ್ಮುಂಜೆ ಅನುದಾನಿತ ಹಿ ಪ್ರಾ ಶಾಲೆಯ ವೀರಯೋಧ ಯಾದವ್ ಪೂಜಾರಿ ಸಭಾಂಗಣದಲ್ಲಿ ಎರಡು ದಿನಗಳ ಕಾಲ ನಡೆಯಿತು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರು ಎಸಿ ಭಂಡಾರಿ ಅವರ ಅಧ್ಯಕ್ಷತೆಯಲ್ಲಿ ವಿವಿಧ ಸಾಧಕರನ್ನು ಶಾಲು ,ಹಾರ ,ಪೇಟ, ಸ್ಮರಣಿಕೆ ಪುಸ್ತಕ ಅಭಿನಂದನಾ ಪತ್ರಗಳನ್ನು ಇಟ್ಟು ಸನ್ಮಾನಿಸಲಾಯಿತು.

ಸಮ್ಮೆಮೇಳನ ಅಧ್ಯಕ್ಷರಾದ ಹಿರಿಯ ಪತ್ರಕರ್ತ ಪ್ರೊ.ಕೆ ಬಾಲಕೃಷ್ಣಗಟ್ಟಿ, ದ.ಕ ಕ.ಸಾ.ಪ ಅಧ್ಯಕ್ಷರಾದ ಡಾ ಎಂಪಿ ಶ್ರೀನಾಥ್, ಬಂಟ್ವಾಳ ತಾಲೂಕು ಕ.ಸಾ.ಪ ಅಧ್ಯಕ್ಷರಾದ ವಿಶ್ವನಾಥ್, ಕಾರ್ಯದರ್ಶಿ ರಾಜೇಶ್ವರಿ, ರಾಷ್ಟ್ರಪ್ರಶಸ್ತಿ ವಿಜೇತ ಜೇನು ಕೃಷಿ ಕಲಾ ಪ್ರೋತ್ಸಾಹಕರಾದ ಕುಮಾರ್ ಪೆರ್ನಾಜೆ, ನ್ಯಾಯವಾದಿ ಅಶ್ವಿನಿ ಕುಮಾರ್ ರೈ ಕ.ಸಾ.ಪ, ಗೌರವ ಕಾರ್ಯದರ್ಶಿಗಳಾದ ರಮಾನಂದ ನೂಜಿಪ್ಪಾಡಿ, ಸ್ವಾಗತ ಸಮಿತಿಯ ಅಧ್ಯಕ್ಷರಾದ ಉಮೇಶ್ ಸಾಲ್ಯನ್ ಬೆಂಜನ ಪದವು, ಪ್ರಧಾನ ಸಂಚಾಲಕ ಅಬೂಬಕರ್ ಅಮ್ಮುಂಜೆ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಾಮನಾ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಜನಾರ್ದನ ಅಮ್ಮುಂಜೆ, ವಿ. ಸು ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

- Advertisement -

Related news

error: Content is protected !!