- Advertisement -
- Advertisement -
ಬಂಟ್ವಾಳ: ಕ್ಷುಲಕ ಕಾರಣಕ್ಕಾಗಿ ದ್ವಿಚಕ್ರ ವಾಹನ ಸವಾರನೋರ್ವ ಸರಕಾರಿ ವಾಹನವೊಂದರ ಮಿರರ್ ಪುಡಿ ಮಾಡಿದ್ದಲ್ಲದೆ ಕಾರಿನಲ್ಲಿದ್ದ ಸರಕಾರಿ ಅಧಿಕಾರಿಗಳಿಗೆ ಹಲ್ಲೆಗೆ ಮುಂದಾಗಿ ಅವಾಚ್ಯ ಶಬ್ದಗಳಿಂದ ಬೈದಿರುವ ಘಟನೆ ತುಂಬೆ ಎಂಬಲ್ಲಿ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕು ಸಜೀಪನಡು ಗ್ರಾಮದ ಕೋಣಿಮಾರ್ ಮನೆ ಮಹಮ್ಮದ್ ಸಂಶುದ್ದೀನ್(22) ಬಂಧಿತ ಆರೋಪಿ.
ಮಂಗಳೂರು ಜಿ.ಪಂ.ಕಚೇರಿಯ ವಾಹನವೊಂದರ ಚಾಲಕ ದೇವದಾಸ್ ಎಂಬವರು ಈ ಬಗ್ಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಪುತ್ತೂರಿನಲ್ಲಿ ನಡೆಯುವ ಮೀಟಿಂಗ್ ನಲ್ಲಿ ಭಾಗವಹಿಸಲು ಮೂವರು ಅಧಿಕಾರಿಗಳನ್ನು ಕಾರಿನಲ್ಲಿ ಕರೆದುಕೊಂಡು ಹೋಗುವ ವೇಳೆ ತುಂಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ.
ಬಂಟ್ವಾಳ: ಸರ್ಕಾರಿ ಅಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ಬೈದು; ವಾಹನ ಜಖಂ ಮಾಡಿದ ಯುವಕ
- Advertisement -