Sunday, June 21, 2026
spot_imgspot_img
spot_imgspot_img

ಬಂಟ್ವಾಳ : ನಡೆದುಕೊಂಡು ಹೋಗುತ್ತಿದ್ದ ಮೂವರ ಮೇಲೆ ಹೆಜ್ಜೇನು ದಾಳಿ, ಓರ್ವ ಗಂಭೀರ

- Advertisement -
- Advertisement -
vtv vitla

ಬಂಟ್ವಾಳ : ಬಸ್ಸು ನಿಲ್ದಾಣಕ್ಕೆ ನಡೆದುಕೊಂಡು ಹೋಗುತ್ತಿದ್ದ ಮೂವರು ವ್ಯಕ್ತಿಗಳಿಗೆ ನೊಣಗಳು ಕಚ್ಚಿ ಓರ್ವ ಗಂಭೀರವಾಗಿ ಗಾಯಗೊಂಡು, ಇನ್ನಿಬ್ಬರಿಗೆ ಅಲ್ಪಸ್ವಲ್ಪ ಗಾಯಗಳಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಕಲ್ಪನೆ ಎಂಬಲ್ಲಿ ನಡೆದಿದೆ.

ಕಲ್ಪನೆ ನಿವಾಸಿ ಪೂವಪ್ಪ (61) ಗಂಭೀರವಾಗಿ ಗಾಯವಾಗಿದ್ದು, ಅವರನ್ನು ಮಂಗಳೂರು ಎ.ಜೆ.ಆಸ್ಪತ್ರೆಗೆ ದಾಖಲಿಸಿದ್ದು, ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದಂತೆ ಮಹೇಶ್ ಮತ್ತು ಗೋಪಾಲ್ ಇಬ್ಬರು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಲ್ಪನೆಯಿಂದ ಬಿಸಿರೋಡು ಕಡೆಗೆ ಬರುವ ಹಿನ್ನೆಲೆಯಲ್ಲಿ ಮನೆಯಿಂದ ಕಲ್ಪನೆ ಬಸ್ ನಿಲ್ದಾಣಕ್ಕೆ ಬರುವ ಸಂದರ್ಭದಲ್ಲಿ ಹಠಾತ್ ಆಗಿ ಬಂದ ನೊಣಗಳು ಮೂವರ ಮೇಲೆ ಕಚ್ಚಿದೆ. ಪೂವಪ್ಪ ಅವರು ಲಾರಿ ಬಾಡಿ ವರ್ಕ್ ಕೆಲಸ ಮಾಡುತ್ತಿದ್ದು, ಭಾನುವಾರ ರಜೆಯಲ್ಲಿದ್ದರು. ವೈಯಕ್ತಿಕ ಕೆಲಸದ ಹಿನ್ನೆಲೆಯಲ್ಲಿ ಬಿಸಿರೋಡಿಗೆ ಬರುವುದಕ್ಕೆ ಬಸ್ ನಿಲ್ದಾಣದತ್ತ ನಡೆದುಕೊಂಡು ಬರುವ ವೇಳೆ ಘಟನೆ ನಡೆದಿದೆ.

ಇನ್ನು ಉಳಿದ ಇರ್ವರು ತುಂಬೆ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆ ನಡೆದ ಕೂಡಲೇ ಕಲ್ಪನೆ ರಿಕ್ಷಾ ಚಾಲಕರು ಘಟನೆಯಿಂದ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

- Advertisement -

Related news

error: Content is protected !!