- Advertisement -
- Advertisement -
ಬಂಟ್ವಾಳ: ನಾಲ್ಕು ವರ್ಷಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಹೈದರಾಬಾದ್ ನಲ್ಲಿ ಪತ್ತೆಯಾದ ಬಗ್ಗೆ ವರದಿಯಾಗಿದೆ. ಸಜೀಪ ಮುನ್ನೂರು ಗ್ರಾಮದ ಇಂದಿರಾ ನಗರ ನಿವಾಸಿ ತಿಲಕ್ (28) ಅವರು -2019ರ ಮೇ.4 ರಂದು ಕಾಣೆಯಾಗಿದ್ದರು. ಈ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯ ಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣ ಬಗ್ಗೆ ತನಿಖೆಯನ್ನು ಕೈಗೆತ್ತಿಕೊಂಡು ಮಾಹಿತಿ ಸಂಗ್ರಹ ಮಾಡಿದಾಗ ತಿಲಕ್ ಹೈದ್ರಾಬಾದ್ ನಲ್ಲಿ ಇರುವ ಬಗ್ಗೆ ಮಾಹಿತಿ ಲಭ್ಯ ವಾಗುತ್ತದೆ. ಮಾಹಿತಿ ಆಧಾರದ ಮೇಲೆ ಹೈದರಾಬಾದ್ ಗೆ ವಿಶೇಷ ಕರ್ತವ್ಯ ದಲ್ಲಿ ಪೊಲೀಸ್ ಸಿಬ್ಬಂದಿ ಗಣೇಶ್ ಅವರು ತೆರಳಿ ತಿಲಕ್ ಅವರನ್ನು ಕರೆತಂದು ಅವರ ಅಣ್ಣ ದೀಪಕ್ ಅವರೊಂದಿಗೆ ಪೋಲೀಸರ ಸಮ್ಮುಖದಲ್ಲಿ ಮನೆಗೆ ಕಳುಹಿಸಿಕೊಡಲಾಗಿದೆ.
- Advertisement -