Thursday, April 25, 2024
spot_imgspot_img
spot_imgspot_img

ಬಂಟ್ವಾಳ: ಪತ್ರಿಕಾ ದಿನಾಚರಣೆ ಹಾಗೂ ಹಿರಿಯ ಪತ್ರಿಕಾ ವಿತರಕರಿಗೆ ಸನ್ಮಾನ

- Advertisement -G L Acharya panikkar
- Advertisement -

ಬಂಟ್ವಾಳ: ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ಬಂಟ್ವಾಳ ಪ್ರೆಸ್ ಕ್ಲಬ್ ಸಹಯೋಗದೊಂದಿಗೆ ಸನ್ಮಾನ ಕಾರ್ಯಕ್ರಮವು ಬಿ.ಸಿ.ರೋಡ್ ನ ಪ್ರೆಸ್ ಕ್ಲಬ್ ನಲ್ಲಿ ನಡೆಯಿತು.

ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ವೆಲೈಂಟೀನ್ ಡಿಸೋಜಾ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಬಂಟ್ವಾಳದಲ್ಲಿ ವೃತ್ತ ನಿರೀಕ್ಷಕನಾಗಿ ವೃತ್ತಿ ನಡೆಸುತ್ತಿದ್ದ ಸಂದರ್ಭ ಇಲ್ಲಿನ ಪತ್ರಕರ್ತರು ಉತ್ತಮ ಸಹಕಾರ ನೀಡಿದ್ದಾರೆ. ಇದರಿಂದ ಉತ್ತಮ ಕೆಲಸ ಮಾಡಲು ಸಾಧ್ಯವಾಗಿದೆ ಎಂದರು. ಪತ್ರಕರ್ತರ ಕೆಲಸ ಸುಲಭದಲ್ಲ, ಕೆಲವೊಮ್ಮೆ ಜೀವದ ಹಂಗು ತೊರೆದು ಕೆಲಸ ಮಾಡುವ ಅನಿವಾರ್ಯತೆ ಇರುತ್ತದೆ, ಪತ್ರಕರ್ತರದ್ದು ಸಾಹಸದ ಜೀವನ ಎಂದು ತಿಳಿಸಿದರು.

ಮುಖ್ಯ ಅತಿಥಿಯಾಗಿದ್ದ ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ‌ ಪುಷ್ಪಲತಾ,
ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಶುಭ ಹಾರೈಸಿದರು.
ಸಂಘದ ಅಧ್ಯಕ್ಷ ಹರೀಶ ಮಾಂಬಾಡಿ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಪತ್ರಿಕಾ ವಿತರಕರಾದ ವಿಟ್ಲದ ರಾಜಮ್ಮ ಕೆ.ವಿ, ವಗ್ಗದ ಲೋಕಯ್ಯ ಗೌಡ, ಬಿ.ಸಿ.ರೋಡಿನ ಮಿತ್ತಬೈಲಿನ ನರಸಿಂಹ ಪೈ ಅವರನ್ನು ಸನ್ಮಾನಿಸಲಾಯಿತು.

ಬಂಟ್ವಾಳ ಪ್ರೆಸ್ ಕ್ಲಬ್ ನ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ , ಕಾರ್ಯದರ್ಶಿ ಮಹಮ್ಮದ್ ಆಲಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಪೂರ್ವಾಧ್ಯಕ್ಷ ಸಂದೀಪ್ ಸಾಲ್ಯಾನ್ ಸ್ವಾಗತಿಸಿ, ಪ್ರಾಸ್ತವಿಕವಾಗಿ ಮಾತನಾಡಿದರು. ಸದಸ್ಯರಾದ ವಿಷ್ಣುಗುಪ್ತ ಪುಣಚ, ಕಿರಣ್ ಸರಪಾಡಿ, ರತ್ನದೇವ್ ಪುಂಜಾಲಕಟ್ಟೆ ಸನ್ಮಾನ ಪತ್ರ ವಾಚಿಸಿದರು, ಕಾರ್ಯದರ್ಶಿ ಮಹಮ್ಮದ್ ಅಲಿ ವಿಟ್ಲ ವಂದಿಸಿದರು, ನಿಕಟ ಪೂರ್ವಾಧ್ಯಕ್ಷ ಮೌನೇಶ್ ವಿಶ್ವಕರ್ಮ ಕಾರ್ಯಕ್ರಮ ನಿರೂಪಿಸಿದರು. ಬಂ.ತಾ.ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ, ಹಿರಿಯ ಪತ್ರಿಕಾ ವಿತರಕರಿಗೆ ಸನ್ಮಾನ

- Advertisement -

Related news

error: Content is protected !!