Friday, June 27, 2025
spot_imgspot_img
spot_imgspot_img

ಬಂಟ್ವಾಳ: ಪ್ರಪಾತಕ್ಕೆ ಬಿದ್ದು ಬೈಕ್ ಸಹಸವಾರ ಮೃತ್ಯು

- Advertisement -
- Advertisement -

ಬಂಟ್ವಾಳ: ಬೈಕ್ ಪ್ರಪಾತಕ್ಕೆ ಬಿದ್ದು ಬೈಕಿನಲ್ಲಿದ್ದ ಸಹಸವಾರ ಮೃತಪಟ್ಟ ಘಟನೆ ಮುಂಜಾವಿನ ವೇಳೆ ಬಿಸಿರೋಡಿನ ಕೈಕಂಬ ಸಮೀಪದ ತಲಪಾಡಿ ಎಂಬಲ್ಲಿ ನಡೆದಿದೆ. ಚಿಕ್ಕಮಗಳೂರು ಮೂಲದ ಯುವಕ ಮಂಗಳೂರು ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯಶೋಧರ ಮೃತಪಟ್ಟ ದುರ್ದೈವಿ.

ಈತನ ಸ್ನೇಹಿತ ಬೈಕ್ ಚಲಾಯಿಸುತ್ತಿದ್ದ ಅವಿನಾಶ್ ಅಲ್ಪ ಸ್ವಲ್ಪ ಗಾಯಗಳೊಂದಿಗೆ ಯಾವುದೇ ಪ್ರಾಣಾಪಯವಿಲ್ಲದೆ ಪಾರಾಗಿದ್ದಾನೆ.
ಇವರಿಬ್ಬರೂ ಮಂಗಳೂರು ಸಿಟಿ ಸೆಂಟರ್ ನಲ್ಲಿ ಉದ್ಯೋಗಿಗಳಾಗಿದ್ದು, ಬೆಳ್ತಂಗಡಿಯಲ್ಲಿ ಸ್ನೇಹಿತನ ಮನೆಯಲ್ಲಿ ನಡೆಯುವ ಕೋಲಕ್ಕೆ ಹೋಗಿ ಅಲ್ಲಿಂದ ಸುಮಾರು 3.30 ಗಂಟೆ ವೇಳೆಗೆ ಬರುತ್ತಿರುವಾಗ ಬಿಸಿರೋಡಿನ ಕೈಕಂಬ ಸಮೀಪದ ಕೆ.ಎಸ್.ಆರ್.ಟಿ.ಸಿ.ಬಸ್ ಡಿಪೋ ದ ಬಳಿ ತಲಪಾಡಿ ಎಂಬಲ್ಲಿ ಸುಮಾರು ಹತ್ತಕ್ಕೂ ಅಧಿಕ ಅಡಿ ಇರುವ ಆಳಕ್ಕೆ ಬಿದ್ದಿದೆ.

ಬೈಕಿನ ಹಿಂಬದಿಯಲ್ಲಿ ಇದ್ದ ಸಹಸವಾರ ಯಶೋಧರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅಪಘಾತಕ್ಕೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ. ಮೆಲ್ಕಾರ್ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!