ಬಂಟ್ವಾಳ: ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಬಂಧಿತ ಆರೋಪಿಗಳನ್ನು ನೆಹರುನಗರ ಅಕ್ಬರ್, ಗುರುವಾಯನಕೆರೆ ಸಿದ್ದೀಕ್, ಪುಂಜಾಲಕಟ್ಟೆ ಸಮೀರ್ ಎನ್ನಲಾಗಿದೆ. ಇತ್ತೀಚೆಗೆ ಬಂಟ್ವಾಳ ನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಬೈಕ್ ಕಳವು ಮಾಡಿದ ಪ್ರಕರಣದಲ್ಲಿ ಈ ಮೂವರು ಆರೋಪಿಗಳ ಬಂಧನ ಮಾಡಲಾಗಿದೆ. ಬಂಟ್ವಾಳ ನಗರ ಠಾಣಾ ಪೋಲೀಸ್ ಠಾಣೆಯ ಇನ್ಸ್ ಪೆಕ್ಟರ್ ವಿವೇಕಾನಂದ ಅವರ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಬಂಟ್ವಾಳ ಸಮೀಪದ ಮಣಿಹಳ್ಳ ಎಂಬಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಬೈಕ್ ಹಾಗೂ ಬಿಸಿರೋಡು ರೈಲ್ವೆ ನಿಲ್ದಾಣ ದಲ್ಲಿ ನಿಲ್ಲಿಸಿದ್ದ ಬೈಕ್ ಗಳ ಕಳ್ಳತನ ನಡೆದಿದ್ದು, ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಬಂಧನ ದ ಬಳಿಕ ಆರೋಪಿಗಳಿಂದ ಕಳ್ಳತನ ಮಾಡಿದ್ದ ಎರಡು ಬೈಕ್ ಹಾಗೂ ಕೃತ್ಯಕ್ಕೆ ಉಪಯೋಗಿಸಿದ ಕಾರನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಆರೋಪಿಗಳನ್ನು ಪೋಲೀಸ್ ಕಸ್ಟಡಿಗೆ ನೀಡಿದೆ.