- Advertisement -
- Advertisement -
ಬಂಟ್ವಾಳ; ಬೈಕ್ವೊಂದಕ್ಕೆ KSRTC ಬಸ್ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಬಂಟ್ವಾಳ ಸಮೀಪದ ಜಕ್ರಿಬೆಟ್ಟು ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಸರಪಾಡಿ ನಿವಾಸಿ ಅವಿವಾಹಿತ ಯುವಕ ಸೇಸಪ್ಪ ಯಾನೆ ಶ್ರೇಯಸ್ (30) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.
ಖಾಸಗಿ ಕಂಪೆನಿಯೊಂದರಲ್ಲಿ ಚಾಲಕನಾಗಿ ದುಡಿಯುತ್ತಿದ್ದರು. ಬಡಕುಟುಂಬದ ಯುವಕನಾಗಿದ್ದು, ಸಂಜೆ ವೇಳೆ ವೃತ್ತಿ ಮುಗಿಸಿ ಮನೆಗೆ ವಾಪಾಸು ಬೈಕಿನಲ್ಲಿ ಹೋಗುವ ವೇಳೆ ಅಪಘಾತ ಸಂಭವಿಸಿದೆ. ಬಿಸಿರೋಡು ಕಡೆಯಿಂದ ಹೋಗುತ್ತಿದ್ದಾಗ ಧರ್ಮಸ್ಥಳ ಕಡೆಯಿಂದ ವೇಗವಾಗಿ ಬಂದ ಬಸ್ಸು ಚಾಲಕನ ನಿಯಂತ್ರಣ ಕಳೆದುಕೊಂಡು ಎದುರಿನಿಂದ ಬೈಕಿಗೆ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ಜಖಂಗೊಂಡಿದ್ದು, ಯುವಕ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಚಿಕಿತ್ಸೆಗೆಂದು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮದ್ಯೆ ಕೊನೆಯುಸಿರೆಳೆದಿದ್ದಾಗಿ ಮೂಲಗಳು ತಿಳಿಸಿದೆ. ಘಟನಾ ಸ್ಥಳಕ್ಕೆ ಟ್ರಾಫಿಕ್ ಎಸ್.ಐ.ಮೂರ್ತಿ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -