Saturday, June 28, 2025
spot_imgspot_img
spot_imgspot_img

ಬಂಟ್ವಾಳ: ಮಂಚಿ ಕೊಳ್ನಾಡು ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

- Advertisement -
- Advertisement -

ಬಂಟ್ವಾಳ: ಕರ್ನಾಟಕ ಟಾರ್ಗೆಟ್ ಬಾಲ್ ಅಸೋಸಿಯೇಷನ್ (ರಿ) ಇದರ ವತಿಯಿಂದ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಟಾರ್ಗೆಟ್ ಬಾಲ್ ಪಂದ್ಯಾವಳಿಯಲ್ಲಿ ಸಬ್ ಜೂನಿಯರ್ ವಿಭಾಗದಲ್ಲಿ ಸರಕಾರಿ ಪ್ರೌಢಶಾಲೆ ಮಂಚಿ ಕೊಳ್ನಾಡು ಬಂಟ್ವಾಳ ಇಲ್ಲಿನ ವಿದ್ಯಾರ್ಥಿಗಳಾದ ಅಬ್ದುಲ್ ಖಾದರ್ ಮುಶೀನ್ ಮತ್ತು ಶಾಹುಲ್ ಅಹ್ಮದ್ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ರಾಜ್ಯಮಟ್ಟದ ಟಾರ್ಗೆಟ್ ಬಾಲ್ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನವನ್ನು ನೀಡಿದ್ದಾರೆ. ಈಗಾಗಲೇ ಕ್ರೀಡೆಯಲ್ಲಿ ವಿಶೇಷ ಪ್ರತಿಭಾನ್ವಿತರಾಗಿರುವ ಇವರು ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಟಾರ್ಗೆಟ್ ಬಾಲ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿರುತ್ತಾರೆ. ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕರಾಗಿರುವ ರಾಜೇಶ್ ಇವರು ಮಾರ್ಗದರ್ಶನ ನೀಡಿದ್ದಾರೆ . ಶಾಲಾ ಮುಖ್ಯ ಶಿಕ್ಷಕಿ ಸುಶೀಲಾ ಹಾಗೂ ಶಿಕ್ಷಕ ವೃಂದ ಪ್ರೋತ್ಸಾಹಿಸಿದರು.

- Advertisement -

Related news

error: Content is protected !!