Saturday, April 20, 2024
spot_imgspot_img
spot_imgspot_img

ಬಂಟ್ವಾಳ: ಮದುವೆಯಾಗುವಂತೆ ಒತ್ತಾಯಿಸಿ ಯುವತಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣ; ಆರೋಪಿ ಸದಾಶಿವನಿಗೆ ನಿರೀಕ್ಷಣಾ ಜಾಮೀನು ಮಂಜೂರು

- Advertisement -G L Acharya panikkar
- Advertisement -

ಬಂಟ್ಬಾಳ: ಮದುವೆಯಾಗುವಂತೆ ಒತ್ತಾಯಿಸಿ ವ್ಯಕ್ತಿಯೋರ್ವ ಅಕ್ರಮವಾಗಿ ಮನೆಗೆ ಪ್ರವೇಶಿಸಿ ಯುವತಿಯ ಮೇಲೆ ಅತ್ಯಾಚಾರ ಎಸಗಿ ಜೀವ ಬೆದರಿಕೆಯೊಡ್ಡಿರುವ ಘಟನೆ ಇಡ್ಕಿದು ಗ್ರಾಮದಲ್ಲಿ ನಡೆದಿದೆ.

ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದ ಸದಾಶಿವ ಎಂಬಾತ ಆರೋಪಿ

ಸದಾಶಿವ ಎಂಬಾತ ಅದೇ ಗ್ರಾಮದ ಯುವತಿಯೊರ್ವಳನ್ನು ತನ್ನನ್ನು ಮದುವೆಯಾಗುವಂತೆ ಒತ್ತಾಯಿಸಿದ್ದಾನೆ. ಯುವತಿ ಅದಕ್ಕೆ ಒಪ್ಪದಿದ್ದಾಗ ಆಕೆಯ ಮನೆಗೆ ಅಕ್ರಮ ಪ್ರವೇಶ ಮಾಡಿ ಅತ್ಯಾಚಾರ ಎಸಗಿ ಜೀವ ಬೆದರಿಕೆಯೊಡ್ಡಿರುವ ಆರೋಪದಡಿ ಆತನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 448,376 ಹಾಗೂ 506 ರಡಿ ಪ್ರಕರಣ ದಾಖಲಾಗಿತ್ತು.

ಆರೋಪಿ ತಲೆಮರೆಸಿಕೊಂಡಿದ್ದು, ಪ್ರಕರಣದಲ್ಲಿ ಆರೋಪಿ ಸದಾಶಿವನನ್ನು ಬಂಧಿಸದಂತೆ ಮಾನ್ಯ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಲಯ ಆತನಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪರ ನ್ಯಾಯವಾದಿಗಳಾದ ಶ್ರೀ ಪಿ. ಜಯರಾಮ ರೈ,ಶ್ರೀ ದೀಪಕ್ ಪೆರಾಜೆ ಮತ್ತು ಹರ್ಷಿತ್ ಶಕ್ತಿನಗರ ವಾದಿಸಿದ್ದಾರೆ.

- Advertisement -

Related news

error: Content is protected !!