Sunday, June 29, 2025
spot_imgspot_img
spot_imgspot_img

ಬಂಟ್ವಾಳ: ಮಸೀದಿಗೆ ನುಗ್ಗಿ ಗುರುವಿಗೆ ಕೊಲೆ ಬೆದರಿಕೆ.! ಬಾಬು ಪೂಜಾರಿ ಪೊಲೀಸ್ ವಶ.?

- Advertisement -
- Advertisement -

ಬಂಟ್ವಾಳ: ಮಸೀದಿಯ ಒಳ ನುಗ್ಗಿದ ವ್ಯಕ್ತಿ ಮಸೀದಿಯ ಗುರುಗಳನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ ಘಟನೆ ತಡರಾತ್ರಿ ಬಿ.ಸಿ.ರೋಡು ಬಳಿಯ ಮಿತ್ತಬೈಲು ಕೇಂದ್ರ ಜುಮಾ ಮಸೀದಿಯಲ್ಲಿ ನಡೆದಿದೆ.

ಆರೋಪಿ – ಬಾಬು ಪೂಜಾರಿ(60)

ಆರೋಪಿಯನ್ನು ಬಾಬು ಪೂಜಾರಿ(60) ಎಂದು ಗುರುತಿಸಲಾಗಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಮಸೀದಿಯ ಬಳಿ ದ್ವಿಚಕ್ರ ವಾಹನವನ್ನಿಟ್ಟು ಅಕ್ರಮವಾಗಿ ಮಸೀದಿಯೊಳಗೆ ನುಗ್ಗಿದ್ದಾನೆ. ಈ ವೇಳೆ ಮಸೀದಿಯ ಗುರುಗಳು ಆತನನ್ನು ವಿಚಾರಿಸಿದಾಗ, ನಾನು ಮಸೀದಿಯ ಗುರುಗಳನ್ನು ಹತ್ಯೆ ಮಾಡಲು ಬಂದಿದ್ದೆನೆ. ಹತ್ಯೆ ಮಾಡುತ್ತೇನೆ, ನನ್ನನ್ನು ನೀವು ಏನು ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾನೆ ಎನ್ನಲಾಗಿದೆ. ಆತನ ದ್ವಿಚಕ್ರ ವಾಹನವನ್ನು ಪರಿಶೀಲಿಸಿದಾಗ ಅದರಲ್ಲಿ ಚಾಕು ಪತ್ತೆಯಾಗಿದೆ. ಬಳಿಕ ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ತೆರಳಿ ಆರೋಪಿಯನ್ನು ವಶಕ್ಕೆ ಪಡೆದು ಮಸೀದಿಗೆ ರಕ್ಷಣೆ ಒದಗಿಸಿದ್ದಾರೆ.

- Advertisement -

Related news

error: Content is protected !!