Thursday, May 2, 2024
spot_imgspot_img
spot_imgspot_img

ಬಂಟ್ವಾಳ: ಮಸೀದಿಗೆ ನುಗ್ಗಿ ಧರ್ಮಗುರುಗಳ ಮೇಲೆ ಹಲ್ಲೆಗೆ ಯತ್ನ; ಮೂವರು ಪೊಲೀಸರ ವಶಕ್ಕೆ!

- Advertisement -G L Acharya panikkar
- Advertisement -

ಬಂಟ್ವಾಳ: ಮಸೀದಿಗೆ ನುಗ್ಗಿ ಧರ್ಮಗುರುಗಳ ಮೇಲೆ ಹಲ್ಲೆಗೆ ಯತ್ನಿಸಿದ ಮೂವರನ್ನು ಕೊಣಾಜೆ ಪೊಲೀಸರು ಸೋಮವಾರದಂದು ಬಂಧಿಸಿದ್ದಾರೆ. ಬಂಟ್ವಾಳದ ಕಾರ್ನಾಡ್ ನಿವಾಸಿ ಶರಣ್ (24), ವಿಘ್ನೇಶ್ (23) ಮತ್ತು ಹರ್ಷಿತ್ (22) ಬಂಧಿತರು.

ಭಾನುವಾರ ಮಧ್ಯರಾತ್ರಿ ಆರೋಪಿಗಳು ದ್ವಿಚಕ್ರ ವಾಹನದಲ್ಲಿ ಬಂದು ಅಬ್ದುಲ್ ಸಮೀರ್ ಮನೆ ಬಳಿ ಬಂದ ಆರೋಪಿಗಳು ಮುಸ್ಲಿಂ ಸಮುದಾಯವನ್ನು ನಿಂದಿಸಿದ್ದು, ಅಬ್ದುಲ್ ಸಮೀರ್ ಮನೆಯಿಂದ ಹೊರಗೆ ಬಂದಾಗ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಆ ಬಳಿಕ ಮಸೀದಿಗೆ ನುಗ್ಗಿ ಧರ್ಮಗುರುಗಳನ್ನು ನಿಂದಿಸಿ ಹಲ್ಲೆಗೆ ಯತ್ನಿಸಿದ್ದು, ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ದೂರು ನೀಡಲಾಗಿತ್ತು. ಈ ಘಟನೆಗೆ ಸಂಬಂಧಿಸಿ ಮೂವರನ್ನು ಬಂಧಿಸಿದ್ದಾರೆ.

- Advertisement -

Related news

error: Content is protected !!