Monday, April 29, 2024
spot_imgspot_img
spot_imgspot_img

ಬಂಟ್ವಾಳ: ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ; ಮೂವರು ಖಾಕಿ ವಶಕ್ಕೆ

- Advertisement -G L Acharya panikkar
- Advertisement -
driving

ಬಂಟ್ವಾಳ: ಯುವಕನೊಬ್ಬ ತನ್ನ ಗೆಳೆಯನ ಮನೆಗೆ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಅಪರಿಚಿತರ ತಂಡವೊಂದು ಹಲ್ಲೆ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಪುಂಜಾಲಕಟ್ಟೆ ಪೇಟೆಯಲ್ಲಿ ಗುರುವಾರ ಸಂಜೆ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿ ಕಿರಣ್ ಕುಮಾರ್(29) ಎನ್ನಲಾಗಿದೆ.

ಕಿರಣ್ ಕುಮಾರ್ ಅವರು ಗುರುವಾರ ಸಂಜೆ ತನ್ನ ಸ್ನೇಹಿತ ನಿತೀನ್ ಎಂಬವರ ಮನೆಗೆ ಬೈಕಿನಲ್ಲಿ ಹೋಗುತ್ತಿದ್ದ ವೇಳೆ 8-10 ಮಂದಿಯ ಅಪರಿಚಿತರ ತಂಡವೊಂದು ಬೈಕನ್ನು ಅಡ್ಡಕಟ್ಟಿ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಅಲ್ಲದೇ ತಲೆಗೆ ಕಲ್ಲಿನಿಂದ ಹೊಡೆದು ದುಷ್ಕರ್ಮಿಗಳು ಪರಾರಿಯಾಗಿದ್ದರು. ಹಲ್ಲೆಗೊಳಗಾದ ಕಿರಣ್ ಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಈ ಘಟನೆ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದಕ್ಕೆ ಸಂಬಂಧಿಸಿ ಪೊಲೀಸರು ಮೂವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಪುತ್ತೂರು: ಚಿನ್ನಾಭರಣವನ್ನು ಪಾಲಿಶ್‌ ಮಾಡಿ ಕೊಡುವುದಾಗಿ ನಂಬಿಸಿ ಐದೂವರೆ ಪವನ್‌ ಚಿನ್ನ ಕರಗಿಸಿದ ವಂಚಕ; ದೂರು ದಾಖಲು!

- Advertisement -

Related news

error: Content is protected !!