Monday, May 6, 2024
spot_imgspot_img
spot_imgspot_img

ಬಂಟ್ವಾಳ: ಯುವಕನೋರ್ವನಿಗೆ ಚೂರಿ ಇರಿದು ಕೊಲೆ ಪ್ರಯತ್ನ; ಪರಾರಿಯಾಗಿದ್ದ ಆರೋಪಿಯ ಬಂಧನ

- Advertisement -G L Acharya panikkar
- Advertisement -
vtv vitla

ಬಂಟ್ವಾಳ: ಯುವಕನೋರ್ವನಿಗೆ ಚೂರಿಯಿಂದ ಇರಿದು ಕೊಲೆಗೆ ಪ್ರಯತ್ನಿಸಿ ಪರಾರಿಯಾಗಿದ್ದ ಆರೋಪಿಯನ್ನು ತಿಂಗಳ ಬಳಿಕ ಬಂಟ್ವಾಳ ನಗರ ಪೊಲೀಸ್ ಠಾಣಾ ಎಸ್. ಐ.ರಾಮಕೃಷ್ಣ ಅವರ ನೇತೃತ್ವದ ತಂಡ ಬಂಧಿಸಿದೆ.

ನರಿಕೊಂಬು ಗ್ರಾಮದ ಪಿತ್ತಲಗುಡ್ಡೆ ನಿವಾಸಿ ನಿಸಾರ್ ಯಾನೆ ನಿಸಾರ್ ಆಹಮ್ಮದ್ ಬಂಧಿತ ಆರೋಪಿ.

ಫೆ.18 ರಂದು ಪಾಣೆಮಂಗಳೂರು ಜೈನರಪೇಟೆ ನಿವಾಸಿ ಸುಲೈಮಾನ್ ಎಂಬಾತನಿಗೆ ಕತ್ತರಿಯಿಂದ ಇರಿದು ಕೊಲೆಗೆ ಪ್ರಯತ್ನಿಸಿದ್ದ ಎಂದು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿ ನಿಸಾರ್ ಪ್ರಕರಣವೊಂದರಲ್ಲಿ ಆರೋಪಿಯಾಗಿ ಜೈಲಿಗೆ ಹೋಗಿ ಜೈಲಿನಿಂದ ಹೊರಬಂದಿದ್ದ.ಜೈಲಿನಿಂದ ಹೊರ ಬಂದ ಕೆಲ ದಿನಗಳಲ್ಲಿ ಯೇ ಮತ್ತೆ ಪರಿಚಯಸ್ಥನಿಗೆ ಕ್ಷುಲ್ಲಕ ಕಾರಣಕ್ಕಾಗಿ ಕತ್ತರಿಯಿಂದ ಇರಿದು ಪರಾರಿಯಾಗಿದ್ದ. ಇಂದು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

- Advertisement -

Related news

error: Content is protected !!