Sunday, June 29, 2025
spot_imgspot_img
spot_imgspot_img

ಬಂಟ್ವಾಳ: ರಾಜ್ಯಮಟ್ಟದ ಎಕ್ಸಲೆನ್ಸ್ ಅವಾರ್ಡ್ ಪಡೆದ ತಹಶೀಲ್ದಾರ್ ರಶ್ಮೀ ಎಸ್.ಆರ್‌

- Advertisement -
- Advertisement -

ಬಂಟ್ವಾಳ: ಚುನಾವಣೆಯಲ್ಲಿ ಅತ್ಯುತ್ತಮ ಕಾರ್ಯನಿರ್ವಹಣೆಗಾಗಿ ಬಂಟ್ವಾಳ ತಹಶೀಲ್ದಾರ್ ರಶ್ಮೀ ಎಸ್.ಆರ್ ರವರು 2021-22ನೇ ಸಾಲಿನ ರಾಜ್ಯಮಟ್ಟದ ಎಕ್ಸಲೆನ್ಸ್ ಅವಾರ್ಡ್ ಗೆ ಭಾಜನರಾಗಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ಸಹಾಯಕ ಚುನಾವಣಾ ನೋಂದಣಾಧಿಕಾರಿಯಾಗಿ ಇವರು ನಿರ್ವಹಿಸಿದ ಚುನಾವಣಾ ಪೂರ್ವ ಹಾಗೂ ಚುನಾವಣೋತ್ತರ ಕಾರ್ಯಗಳನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ.

ಕಳೆದ 2011 ರಿಂದ ರಾಷ್ಟ್ರೀಯ ಮತದಾರರ ದಿನದಂದು ಈ ಪ್ರಶಸ್ತಿಯನ್ನು ರಾಜ್ಯಪಾಲರ ಉಪಸ್ಥಿತಿಯಲ್ಲಿ ಚುನಾವಣೆಯಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸಿದ ಅಧಿಕಾರಿಗಳಿಗೆ ನೀಡಲಾಗುತ್ತಿತ್ತು. ಆದರೆ ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ರಾಜ್ಯಪಾಲರ ಕಾರ್ಯದರ್ಶಿಯವರು ವಿಡಿಯೋ ಕಾನ್ಫರೆನ್ಸ್ ನಡೆಸುವ ಮೂಲಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆದಿದೆ.

ಮಂಗಳೂರಿನ ಜಿಲ್ಲಾಪಂಚಾಯತ್ ಸಭಾಂಗಣದಿಂದ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿ.ಪಂ‌.ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಸಹಿತ ಹಲವು ಅಧಿಕಾರಿಗಳು ವಿಡಿಯೋ ಕಾನ್ಪರೆನ್ಸ್ ನಲ್ಲಿ ಭಾಗಿಯಾಗಿದ್ದರು. ಇದೇ ಸಂದರ್ಭ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಮೀನಾ ರ ಸಹಿಯುಳ್ಳ ಪ್ರಶಸ್ತಿಯ ಪ್ರಮಾಣಪತ್ರ ವನ್ನು ತಹಶೀಲ್ದಾರ್ ರಶ್ಮೀ ಎಸ್.ಆರ್ ರವರಿಗೆ ನೀಡಿ ಗೌರವಿಸಲಾಯಿತು.

suvarna gold
- Advertisement -

Related news

error: Content is protected !!