Wednesday, May 15, 2024
spot_imgspot_img
spot_imgspot_img

ಬಂಟ್ವಾಳ: ರಿಕ್ಷಾ ಮತ್ತು ಕಾರು ಮುಖಾಮುಖಿ ಡಿಕ್ಕಿ; ರಿಕ್ಷಾ ಚಾಲಕ ಗಂಭೀರ

- Advertisement -G L Acharya panikkar
- Advertisement -

ಬಂಟ್ವಾಳ: ಕಾರು ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ದ.ಕ ಜಿಲ್ಲೆಯ ಬಂಟ್ವಾಳದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಆಟೋ ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ವಿಟ್ಲ ಸಮೀಪದ ಮಾಣಿಯಿಂದ ವಿಟ್ಲದ ಸೂರಿಕುಮೇರು ಕಡೆಗೆ ಹೋಗುತ್ತಿದ್ದ ರಿಕ್ಷಾಕ್ಕೆ ಕಲ್ಲಡ್ಕ ಕಡೆಯಿಂದ ಬರುತ್ತಿದ್ದ ರಿಟ್ಜ್ ಕಾರು ಮುಖಾಮುಖಿ ಡಿಕ್ಕಿ ಹೊಡೆದಿದೆ.

ಘಟನೆಯಿಂದಾಗಿ ರಿಕ್ಷಾ ಚಾಲಕ ಸೂರಿಕುಮೇರು ಮಸೀದಿ ಅಧ್ಯಕ್ಷ ಮೂಸ ಕರೀಂ ಮಾಣಿ ಅವರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಲ್ಲಿ ಆಟೋ ರಿಕ್ಷಾ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!