- Advertisement -
- Advertisement -
ಬಂಟ್ವಾಳ: ವ್ಯಕ್ತಿಯೋರ್ವರು ನಾಪತ್ತೆಯಾದ ಘಟನೆ ಸಜೀಪ ಮುನ್ನೂರು ಗ್ರಾಮದ ಕೌಳಿಗೆ ಎಂಬಲ್ಲಿ ನಡೆದಿದೆ. ಮನೆಯಲ್ಲಿದ್ದ ಉಡುಗೆಯಲ್ಲಿ ವ್ಯಕ್ತಿ ನಾಪತ್ತೆಯಾಗಿದ್ದು ಘಟನೆಯ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪರಮೇಶ್ವರ ಎಂಬವರು ಮನೆಯಿಂದ ಹೊರಗೆ ಹೋದವರು ಮನೆಗೆ ಬರದೆ ನಾಪತ್ತೆಯಾಗಿದ್ದಾರೆ ಎಂದು ಇವರ ಮಗ ಶಿವಾನಂದ ದೂರು ನೀಡಿದ್ದಾರೆ.
ಎ. 14 ರಂದು ರಾತ್ರಿ ಸುಮಾರು 10 ಗಂಟೆ ವೇಳೆಗೆ ಮನೆಯಲ್ಲಿ ಎಲ್ಲರ ಜೊತೆ ಕುಳಿತುಕೊಂಡಿದ್ದವರು ಮನೆಯಲ್ಲಿದ್ದ ಉಡುಗೆಯಲ್ಲಿ ಮನೆಯಿಂದ ಹೊರಗೆ ಹೋದವರು ಮನೆಗೆ ಬರಲಿಲ್ಲ ಎಂದು ಅವರು ತಿಳಿಸಿದ್ದಾರೆ. ಇವರ ಗುರುತು ಪತ್ತೆಯಾದಲ್ಲಿ ನಗರ ಪೋಲೀಸ್ ಠಾಣೆಯನ್ನು ಸಂಪರ್ಕ ಮಾಡುವಂತೆ ಕೋರಿದ್ದಾರೆ.
- Advertisement -