

ಬಿಸಿರೋಡ್: ಬಸ್ ಪಾಸ್, ಹಾಸ್ಟೆಲ್, ವಿದ್ಯಾರ್ಥಿ ವೇತನ ಹಾಗೂ ವಿವಿಧ ಶೈಕ್ಷಣಿಕ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಬಿಸಿರೋಡಿನ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಸೋಮವಾರ ಪ್ರತಿಭಟನೆ ನಡೆಸಿ ಬಂಟ್ವಾಳ ತಹಶೀಲ್ದಾರ್ ಮೂಲಕ ಗೃಹ ಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.

ರಾಜ್ಯದಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳಿದೆ. ಎಲ್ಲಾ ಜಿಲ್ಲೆಗಳಲ್ಲಿ ಎಸ್ಸೆಸ್ಸೆಲ್ಸಿ ,ಪಿಯುಸಿ,ಪದವಿ, ಸ್ನಾತಕೋತ್ತರ ತರಗತಿಗಳು ಪ್ರಾರಂಭಗೊಂಡಿವೆ. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಆದರೆ ಬಹಳಷ್ಟು ಶೈಕ್ಷಣಿಕ ಚಟುವಟಿಕೆಗೆ ತೀವ್ರ ಹಿನ್ನಡೆಯನ್ನುಂಟು ಮಾಡಿದೆ.


ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ನಗರ ಗ್ರಾಮೀಣ ಬಸ್ ಸೇವೆ ಮರು ಆರಂಭಿಸಬೇಕು ಶಿಷ್ಯವೇತನ ತಕ್ಷಣ ಬಿಡುಗಡೆಗೊಳಿಸಬೇಕು ,ಡಿಪ್ಲೊಮಾ ಇಂಜಿನಿಯರಿಂಗ್ ,ಸ್ನಾತಕೋತ್ತರ ತರಗತಿ ,ಪಿಎಚ್ ಡಿ ಮಾಡುತಿರುವ ಎಸ್ಸಿ ,ಎಸ್ಟಿ,ಒಬಿಸಿ, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದ ಶಿಷ್ಯವೇತನ ನೀಡಲು ಕ್ರಮಗೊಳ್ಳಬೇಕು. ವಿದ್ಯಾಸಿರಿ ನೀಡಬೇಕು. ವಸತಿ ನಿಲಯಗಳ ಸಂಖ್ಯೆ ಹೆಚ್ವಿಸಿ , ನಿಲಯಗಳಲ್ಲಿ ಹಾಲಿ ಇರುವ ಸಮಸ್ಯೆಗಳನ್ನು ಬೇಗನೆ ಬಗೆಹರಿಸಬೇಕು ಎಂದು ಒತ್ತಾಯಿಸಲಾಯಿತು.

ಸಂದರ್ಭದಲ್ಲಿ ಪ್ರಮುಖರಾದ ಮಂಗಳೂರು ವಿಭಾಗ ಸಂಚಾಲಕರಾದ ಹರ್ಷಿತ್ ಕೊಯಿಲ, ಮಂಗಳೂರು ಜಿಲ್ಲಾ ಸಂಚಾಲಕರಾದ ನಿಶಾನ್ ಆಳ್ವ ,ಬಂಟ್ವಾಳ ತಾಲೂಕು ಸಂಚಾಲಕರಾದ ದಿನೇಶ್ ಕೊಯಿಲ, ಹಾಗೂ ಶಿವಪ್ರಸಾದ್ ,ಶ್ರೇಯಸ್,ಪ್ರತೀಕ್ ,ಮಹೇಶ್,ಶುಶಾಂತ್,ನಿಕೇಶ್,ನಿಶಾಂತ್ ಕಾರ್ಯಕರ್ತರು ಉಪಸ್ಥಿತರಿದ್ದರು.


