Friday, May 3, 2024
spot_imgspot_img
spot_imgspot_img

ಬಂಟ್ವಾಳ: ಶ್ರೀ ಶಾರದಾ ಫ್ರೆಂಡ್ಸ್ ಸರ್ಕಲ್ (ರಿ.), ವಿದ್ಯಾನಗರ ಸಜೀಪಮುನ್ನೂರು ಸಂಘಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

- Advertisement -G L Acharya panikkar
- Advertisement -

ಬಂಟ್ವಾಳ : ಕಳೆದ 30 ವರ್ಷಗಳಿಂದ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಶ್ರೀ ಶಾರದಾ ಫ್ರೆಂಡ್ಸ್ ಸರ್ಕಲ್ (ರಿ.), ವಿದ್ಯಾನಗರ ಸಜೀಪಮುನ್ನೂರು, ಈ ಸಂಘಕ್ಕೆ ಈ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

ಶ್ರೀ ಶಾರದಾ ಫ್ರೆಂಡ್ಸ್ ಸರ್ಕಲ್ (ರಿ.), ವಿದ್ಯಾನಗರ ಸಜೀಪಮುನ್ನೂರು, ಈ ಸಂಘ ಕಳೆದ 30 ವರ್ಷಗಳಿಂದ ನಿಸ್ವಾರ್ಥತೆಯಿಂದ ಸೇವೆ ಸಲ್ಲಿಸುತ್ತಿದ್ದು, ಸಂಘದ ಸದಸ್ಯರು ದುಡಿದ ಸಂಬಳದ ಸ್ವಲ್ಪಭಾಗವನ್ನು ಸಮಾಜ ಸೇವೆಗೆ ದೇಣಿಗೆಯಾಗಿ ನೀಡಿ, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಅರಳು ಪ್ರತಿಭೆ ಗಳನ್ನು ಆನ್ವೇತಿಸಿ, ಪೋಷಿಸಿ, ಸಮಾಜಕ್ಕೆ ಕೊಡುಗೆಯಾಗಿ ನೀಡುತ್ತಿದೆ. ಇದುವರೆಗೆ ಸೇವಾ ಕಾರ್ಯಗಳನ್ನು ಅಡೆತಡೆಯಿಲ್ಲದೆ ನಿರಂತರವಾಗಿ ನಡೆಸಿಕೊಂಡು ಬಂದಿರುತ್ತದೆ.

ಈವರೆಗೆ ಯಾವುದೇ ಪ್ರಚಾರಗಳಿಗೆ ಒತ್ತು ಕೊಡದೇ ಕೇವಲ ಸೇವಾಧರ್ಮದಿಂದ ಸಮಾಜಪರವಾದ ಕೆಲಸಗಳನ್ನು ಮಾಡುತ್ತಾ ಬಂದಿರುವ ಈ ಸಂಘವು ಪ್ರಸಕ್ತ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿ ಪ್ರಶಸ್ತಿ ಪಡೆದುಕೊಂಡಿದೆ.

- Advertisement -

Related news

error: Content is protected !!