- Advertisement -
- Advertisement -
ವಿಟ್ಲ: ಸರ್ಕಾರಿ ಬಸ್ಸು ಮತ್ತು ಎರಡು ಕಾರುಗಳ ನಡುವೆ ಭೀಕರ ಸರಣಿ ಅಪಘಾತ ನಡೆದ ಘಟನೆ ಬಂಟ್ವಾಳದ ಮಣಿಹಳ್ಳ ಚಂತಿಮಾರ್ ಬಳಿ ನಡೆದಿದ್ದು, ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ವಿಟ್ಲ ಮೆಸ್ಕಾಂ AE ಸಾವನ್ನಪ್ಪಿದ್ದಾರೆ.
ಮೃತರನ್ನು ವಿಟ್ಲ ಮೆಸ್ಕಾಂ AE ಪ್ರವೀಣ್ ಜೋಶಿ ಎಂದು ಗುರುತಿಸಲಾಗಿದೆ. ಇಂದು ಬಂಟ್ವಾಳದ ಮಣಿಹಳ್ಳ ಚಂತಿಮಾರ್ ಬಳಿ ನಡೆದ ಸರಣಿ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪ್ರವೀಣ್ ಜೋಶಿ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು, ಸದ್ಯ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ವಗ್ಗದ ತನ್ನ ಮನೆಯಿಂದ ಕರ್ತವ್ಯಕ್ಕೆ ಕಾರಿನಲ್ಲಿ ಬರುತ್ತಿದ್ದ ಪ್ರವೀಣ್ ಜೋಶಿ ಅವರನ್ನು ಕಾರಿನಿಂದ ಹೊರತೆಗೆಯಲು ಹರಸಾಹಸ ಪಟ್ಟಿದ್ದರು. ಕ್ರೇನ್ ಮೂಲಕ ಕಾರಿನನೊಳಗೆ ಸಿಲುಕಿದ್ದವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು.
ಬಂಟ್ವಾಳ: ಸರ್ಕಾರಿ ಬಸ್ಸು ಮತ್ತು ಎರಡು ಕಾರುಗಳ ನಡುವೆ ಸರಣಿ ಅಪಘಾತ; ನುಜ್ಜುಗುಜ್ಜಾದ ಕಾರು.
- Advertisement -