Saturday, June 28, 2025
spot_imgspot_img
spot_imgspot_img

ಬಂಟ್ವಾಳ: ಸರ್ಕಾರಿ ಅಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ಬೈದು; ವಾಹನ ಜಖಂ ಮಾಡಿದ ಯುವಕ

- Advertisement -
- Advertisement -

ಬಂಟ್ವಾಳ: ಕ್ಷುಲಕ ಕಾರಣಕ್ಕಾಗಿ ದ್ವಿಚಕ್ರ ವಾಹನ ಸವಾರನೋರ್ವ ಸರಕಾರಿ ವಾಹನವೊಂದರ ಮಿರರ್ ಪುಡಿ ಮಾಡಿದ್ದಲ್ಲದೆ ಕಾರಿನಲ್ಲಿದ್ದ ಸರಕಾರಿ ಅಧಿಕಾರಿಗಳಿಗೆ ಹಲ್ಲೆಗೆ ಮುಂದಾಗಿ ಅವಾಚ್ಯ ಶಬ್ದಗಳಿಂದ ಬೈದಿರುವ ಘಟನೆ ಇಂದು ಬೆಳಿಗ್ಗೆ ತುಂಬೆ ಎಂಬಲ್ಲಿ ನಡೆದಿದ್ದು, ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಂಗಳೂರು ಜಿ.ಪಂ.ಕಚೇರಿಯ ವಾಹನವೊಂದರ ಚಾಲಕ ದೇವದಾಸ್ ಎಂಬವರು ಈ ಬಗ್ಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಪುತ್ತೂರಿನಲ್ಲಿ ನಡೆಯುವ ಮೀಟಿಂಗ್ ನಲ್ಲಿ ಭಾಗವಹಿಸಲು ಮೂವರು ಅಧಿಕಾರಿಗಳನ್ನು ಕಾರಿನಲ್ಲಿ ಕರೆದುಕೊಂಡು ಹೋಗುವ ವೇಳೆ ತುಂಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ.


ಎದುರಿನ ವಾಹನವೊಂದು ಬ್ರೇಕ್ ಹಾಕಿದ ಕಾರಣ ಜಿ.ಪಂ.ಇಲಾಖೆಯ ವಾಹನ ಚಾಲಕ ಜಗದೀಶ್ ಅವರು ಕೂಡ ಬ್ರೇಕ್ ಹಾಕಿದ್ದಾರೆ. ವೇಗವಾಗಿ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಯುವಕ ಕಾರಿನ ಹಿಂಬದಿಯಲ್ಲಿದ್ದು ಆತ ಕೂಡ ಬ್ರೇಕ್ ಹಾಕಿದಾಗ ನಿಯಂತ್ರಣ ಕಳೆದುಕೊಂಡು ಸ್ಕಿಡ್ ಆಗಿ ಬಿದ್ದಿದ್ದು, ಈ ಕಾರಣಕ್ಕಾಗಿ ಆತ ಕಾರಿಗೆ ದ್ವಿಚಕ್ರವಾಹನವನ್ನು ಅಡ್ಡ ಇಟ್ಟು ತಡೆಒಡ್ಡಿ ಬಳಿಕ ಕಾರಿನ ಮಿರರ್ ಪುಡಿ ಮಾಡಿ ಆ ಬಳಿಕ ಚಾಲಕ ಸಹಿತ ಕಾರಿನಲ್ಲಿದ್ದ ಅಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ಬೈದಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!