Sunday, May 5, 2024
spot_imgspot_img
spot_imgspot_img

ಬಂಟ್ವಾಳ: ಸಲಿಂಗಕಾಮಕ್ಕೆ ಉದ್ಯೋಗ ಅಡ್ಡಿಯಾಗುತ್ತೆ ಎಂದು ಹದಿಹರೆಯದ ಯುವಕನನ್ನು ಸುಟ್ಟು ಕೊಂದ ಆಟೋ ಚಾಲಕ

- Advertisement -G L Acharya panikkar
- Advertisement -

ಬಂಟ್ವಾಳ: ಗಾಂಜಾ ವ್ಯಸನಿಯ ಅನೈತಿಕ ವ್ಯವಹಾರಕ್ಕೆ ಸಂಬಂಧಿಸಿದಂತೆ ಕೊಲೆಯಾದ ಯುವಕ ಸುರಿಬೈಲು ನಿವಾಸಿ ಸಮಾದ್ ನ ಶವವನ್ನು ಇಂದು ಮನೆಯವರಿಗೆ ಹಸ್ತಾಂತರ ಮಾಡಲಾಗಿದೆ. ಸ್ಥಳಕ್ಕೆ ಮಂಗಳೂರು ವಿಧಿವಿಜ್ಞಾನ ಪ್ರಯೋಗಲಾಯ ಹಾಗೂ ಕೆ.ಎಸ್.ಹೆಗ್ಡೆ ಮೆಡಿಕಲ್ ಆಸ್ಪತ್ರೆಯ ಮಹಾಬಲೇಶ್ವರ ಶೆಟ್ಟಿ ಹಾಗೂ ತಂಡ ಸ್ಥಳದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮನೆಯವರಿಗೆ ಶವವನ್ನು ಹಸ್ತಾಂತರ ಮಾಡಲಾಯಿತು.

ಘಟನೆಯ ವಿವರ

ಸುರಿಬೈಲು ನಿವಾಸಿ ಸಮಾದ್(19) ಕೊಲೆಯಾದ ಯುವಕನಾಗಿದ್ದು, ನ.1ರಂದು ಈತನ ಕೊಲೆಯಾಗಿತ್ತು.

ಬೋಳಂತೂರು ಕೊಕ್ಕೆಪುಣಿ ನಿವಾಸಿ ರಿಕ್ಷಾ ಚಾಲಕ ಅಬ್ದುಲ್‌ ರಹಿಮಾನ್‌ ಯಾನೆ ಅದ್ರಾಮ(40) ಕೊಲೆ ಆರೋಪಿಯಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಇಂದು ಸಂಜೆ ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ತನಿಖೆಯ ದೃಷ್ಟಿಯಿಂದ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಸಮಾದ್ ಹಾಗೂ ಅದ್ರಾಮ ಇಬ್ಬರು ಸ್ನೇಹಿತರಾಗಿದ್ದು ಗಾಂಜಾ ವ್ಯಸನಿಗಳಾಗಿದ್ದಾರೆ, ಜೊತೆಗೆ ಇವರೊಳಗೆ ಅನೈತಿಕ ವ್ಯವಹಾರಗಳು ನಡೆಯುತ್ತಿದ್ದವು. ಈ ವಿಚಾರ ಮನೆಯವರಿಗೆ ಗೊತ್ತಾಗಿ ಬಳಿಕ ಸಮಾದ್ ನನ್ನು ಉದ್ಯೋಗಕ್ಕಾಗಿ ಬೆಂಗಳೂರಿಗೆ ಕಳುಹಿಸಿದ್ದರು. ಗಾಂಜಾ ವ್ಯಸನದ ಜೊತೆ ಅನೈತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಸಮಾದ್ ಬೆಂಗಳೂರಿನಲ್ಲಿ ಉದ್ಯೋಗಕ್ಕಾಗಿ ಹೋಗುವುದು ಅದ್ರಾಮನಿಗೆ ಇಷ್ಟವಿರಲಿಲ್ಲ. ಹಾಗಾಗಿ ಹೋಗುವುದಕ್ಕೆ ಅನೇಕ ಬಾರಿ ವಿರೋಧ ವ್ಯಕ್ತಪಡಿಸಿದ್ದ ಎಂದು ಹೇಳಲಾಗಿದೆ‌.

ಈ ಮಧ್ಯೆ ಅದ್ರಾಮ ಸಮಾದ್ ನನ್ನು ಊರಿಗೆ ಬರುವಂತೆ ಒತ್ತಾಯಿಸಿದ್ದು, ನ.1ರಂದು ಊರಿಗೆ ಬಂದಿದ್ದ ಸಮಾದ್ ಹಾಗೂ ಅದ್ರಾಮ ಇಬ್ಬರು ಸೇರಿ ಇರಾ ಜನನಿಬಿಡ ಗುಡ್ಡವೊಂದಕ್ಕೆ ಅದ್ರಾಮನ ರಿಕ್ಷಾದಲ್ಲಿ ಹೋಗಿದ್ದರು.

ಅಲ್ಲಿ ಅವರು ಏನು ವ್ಯವಹಾರ ನಡೆದಿತ್ತು ಎಂಬುದು ಇನ್ನು ತನಿಖೆಯ ವೇಳೆ ಬಯಲಾಗಬೇಕಿದೆ. ಆದರೆ ಅರೋಪಿ ಪ್ರಾಥಮಿಕ ತನಿಖೆಯ ವೇಳೆ ಹೇಳಿದಂತೆ ಇಬ್ಬರು ಗಾಂಜಾ ಸೇವಿಸಿದ ಬಳಿಕ ಈತ ಬೆಂಗಳೂರಿಗೆ ತೆರಳದಂತೆ ಇವರಿಬ್ಬರ ಮಧ್ಯೆ ಜಗಳ ಆಗಿದೆ. ಬಳಿಕ ಇಬ್ಬರೂ ‌ಗುಡ್ಡೆಯಲ್ಲಿ ಮಲಗಿದ್ದರು.ಈ ಸಂದರ್ಭದಲ್ಲಿ ಅದ್ರಾಮ ರಿಕ್ಷಾದಲ್ಲಿ ಇರಿಸಿದ್ದ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾನೆ ಎಂಬ ಮಾಹಿತಿ ತನಿಖೆ ವೇಳೆ ಬಹಿರಂಗವಾಗಿದೆ ಎಂದು ಹೇಳಲಾಗಿದೆ.

ಈ ನಡುವೆ, ನ.7ರಂದು ಆಬ್ದುಲ್ ರಹಿಮಾನ್ ತನ್ನ ಆಟೋದಲ್ಲಿ ಪೆಟ್ರೋಲ್‌ ಇಲ್ಲ ತುರ್ತಾಗಿ ಒಂದು ಕಡೆ ಹೋಗಲಿಕ್ಕಿದೆ ಎಂದು ಹೇಳಿ ತನ್ನ ಸಂಬಂಧಿಕ ಸಲೀಂ ಎಂಬಾತನಲ್ಲಿ ಹೇಳಿದ ಇದರಂತೆ, ಸಲೀಂ ಜೊತೆಗೆ ಬೈಕಿನಲ್ಲಿ ಇರಾ ಪದವು ಕಡೆಗೆ ಹೋಗಿದ್ದು ಅಲ್ಲಿ ಬೈಕ್ ನಿಲ್ಲಿಸಿ ಅಬ್ದುಲ್ ಸಮಾದ್ ನನ್ನು ಕೊಲೆಗೈದಿರುವ ವಿಷಯ ತಿಳಿಸಿದ್ದಾನೆ ತಕರಾರು ಉಂಟಾಗಿ ಪೆಟ್ರೋಲ್ ಸುರಿದು ಕೊಲೆ ಮಾಡಿದ್ದೇನೆ ಆತನನ್ನು ಹೊಂಡದಲ್ಲಿ ಮುಚ್ಚಿ ಮಣ್ಣು ಮಾಡಲು ಸಹಕರಿಸುವಂತೆ ಕೇಳಿಕೊಂಡಿದ್ದ ಅವನ ಮಾತು ಕೇಳಿ ಹೆದರಿದ ಸಲೀಂ ಅಬ್ದುಲ್ ರಹಿಮಾನನ್ನು ಅಲ್ಲಿಯೇ ಬಿಟ್ಟು ಬೈಕಿನಲ್ಲಿ ಸ್ಥಳದಿಂದ ಕಾಲ್ಕಿತ್ತಿದ್ದ ತನ್ನ ಮನೆಗೆ ಬಂದು ವಿಷಯವನ್ನು ಹೇಳಿದ್ದು ಮನೆಯವರ ಸೂಚನೆಯಂತೆ ಸಲೀಂ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದ

ಬೆಂಗಳೂರಿನಿಂದ ಊರಿಗೆ ಬಂದಿದ್ದ ಯುವಕ ಸಮಾದ್‌ ನಾಪತ್ತೆಯಾಗಿದ್ದರಿಂದ ವಿಟ್ಲ ಪೊಲೀಸರಿಗೆ ಮನೆಯವರು ದೂರು ನೀಡಿದ್ದರು.

- Advertisement -

Related news

error: Content is protected !!