- Advertisement -
- Advertisement -
ಬಂಟ್ವಾಳ: ಕಲ್ಲಿನ ಕೋರೆಯ ಹೊಂಡದಲ್ಲಿದ್ದ ನೀರಿಗೆ ಸ್ನಾನಕ್ಕೆಂದು ಇಳಿದ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರಾತ್ರಿ ನರಿಕೊಂಬು ಗ್ರಾಮದ ಏಲಬೆಯಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ಜಗದೀಶ್(45) ಹಾಗೂ ಅಲ್ಲಿಪಾದೆ ನಿದೀಶ್(17) ಮೃತರು. ಇಬ್ಬರು ಸ್ನಾನಕ್ಕೆಂದು ನೀರಿಗೆ ಇಳಿದಿದ್ದು, ಆ ವೇಳೆ ಹೊಂಡ ಇರುವುದು ತಿಳಿಯದೆ ಮುಳುಗಿ ಮೃತಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ನರಿಕೊಂಬು ಗ್ರಾಮದಲ್ಲಿನ ಕೋರೆ ಅಕ್ರಮವಾಗಿ ಕಾರ್ಯಚರಿಸುತ್ತಿದೆ ಎಂದು ಸ್ಥಳೀಯರು ಈ ಮೊದಲು ಪ್ರತಿಭಟನೆ ನಡೆಸಿದ್ದರು.
ಸ್ಥಳಕ್ಕೆ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಅವರು ಬೇಟಿ ನೀಡದೆ ಶವವನ್ನು ತೆಗೆಯಲು ಬಿಡುವುದಿಲ್ಲ ಎಂದು ಸಾರ್ವಜನಿಕರು ಸ್ಥಳದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಅನಧಿಕೃತ ಕೋರೆ ಎಂದು ನಾವು ಪ್ರತಿಭಟನೆ ನಡೆಸಿದರೂ ಇಲಾಖೆ ಮೌನವಾಗಿದ್ದ ಪರಿಣಾಮವಾಗಿ ಇಂತಹ ದುರ್ಘಟನೆಗೆ ಕಾರಣವಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಬಂಟ್ವಾಳ ನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
- Advertisement -