Friday, May 3, 2024
spot_imgspot_img
spot_imgspot_img

ಬಂಟ್ವಾಳ; ಸ್ನೇಹಿತರೊಂದಿಗೆ ಈಜಲು ತೆರಳಿ ನೀರುಪಾಲದ ಯುವಕನ ಶವ ಉಳ್ಳಾಲ ಸಮುದ್ರ ತೀರದಲ್ಲಿ ಪತ್ತೆ..!

- Advertisement -G L Acharya panikkar
- Advertisement -

ಸಜಿಪನಡು ಗ್ರಾಮದ ತಲೆಮೊಗರುವಿನಲ್ಲಿ ಸ್ನೇಹಿತರೊಂದಿಗೆ ನೇತ್ರಾವತಿ ನದಿಯಲ್ಲಿ ಈಜಲು ಹೋಗಿ ನೀರುಪಾಲಾಗಿದ್ದ ಯುವಕನ ಮೃತದೇಹ ಪತ್ತೆಯಾಗಿದೆ. ಅಶ್ವಿತ್ (19) ಶವವಾಗಿ ಪತ್ತೆಯಾದ ಯುವಕ. ಈತನ ಮೃತದೇಹ ಉಳ್ಳಾಲ ಕೋಟೆಪುರ ಕೋಡಿಯ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.

ತಲೆಮೊಗರು ನಾಗೇಶ್ ಗಾಣಿಗ ಅವರ ಮನೆಯಲ್ಲಿ ಮಗುವಿನ ತೊಟ್ಟಿಲು ಶಾಸ್ತ್ರ ಕಾರ್ಯಕ್ರಮದಲ್ಲಿ ಅಶ್ವಿತ್ ಭಾಗವಹಿಸಿದ್ದರು. ಕಾರ್ಯಕ್ರಮ ಮುಗಿದ ಬಳಿಕ ತಲೆಮೊಗರು ನೇತ್ರಾವತಿ ನದಿಯಲ್ಲಿ ಸಂಬಂಧಿಕ ಸ್ನೇಹಿತರೊಂದಿಗೆ ಅಶ್ವಿತ್ ಈಜಾಡಲು ತೆರಳಿದ್ದರು. ಈ ವೇಳೆ ಅಶ್ವಿತ್ ಮತ್ತು ಹರ್ಷ ಎಂಬಾತ ನೀರುಪಾಲಾಗಿದ್ದಾರೆ. ಈ ವೇಳೆ ಜತೆಯಲ್ಲಿದ್ದ ಇತರ ಯುವಕರು ಹರ್ಷನನ್ನು ರಕ್ಷಿಸಿ ಮೇಲಕ್ಕೆತ್ತಿದ್ದಾರೆ. ಆದರೆ ಅಶ್ವಿತ್‌ನನ್ನು ರಕ್ಷಿಸಲು ಸಾಧ್ಯವಾಗಲಿಲ್ಲ.

ಗೆಳೆಯರು ನೋಡನೋಡುತ್ತಿದ್ದಂತೇ ಅಶ್ವಿತ್ ನೀರುಪಾಲಾಗಿ ನಾಪತ್ತೆಯಾಗಿದ್ದರು. ಪೊಲೀಸರು, ಅಗ್ನಿಶಾಮಕ ದಳ ಮತ್ತು ಸ್ಥಳೀಯರು ಸೇರಿ ಕಳೆದ ಮೂರು ದಿನಗಳಿಂದ ಹುಡುಕಾಟ ನಡೆಸುತ್ತಿದ್ದರು. ಇಂದು ಬೆಳಗ್ಗೆ ಕೋಡಿಯ ಸಮುದ್ರ ತೀರದಲ್ಲಿ ಯುವಕನ ಶವ ಪತ್ತೆಯಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Related news

error: Content is protected !!