- Advertisement -
- Advertisement -
ಬಂಟ್ವಾಳ: ಹಾಡುಹಗಲೇ ಮನೆಗೆ ನುಗ್ಗಿ ಕಪಾಟಿನಲ್ಲಿರಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಬಿಸಿರೋಡ್ ನ ಚಿಕ್ಕಯ್ಯ ಮಠ ಎಂಬಲ್ಲಿ ನಡೆದಿದೆ. ಇಲ್ಲಿನ ಚಿಕ್ಕಯ್ಯ ಮಠ ನಿವಾಸಿ ಸತೀಶ್ ಎಂಬವರ ಮನೆಯಿಂದ ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ ನಡೆದಿದೆ.
ಮನೆಯ ಮುಂಬಾಗಿಲ ಚಿಲಕ ಮುರಿದು ಒಳಗೆ ನುಗ್ಗಿದ ಕಳ್ಳರು ಕಪಾಟಿನಲ್ಲಿದ್ದ ಸುಮಾರು 4.60 ಮೌಲ್ಯ ದ 11.5 ಪವನ್ ಚಿನ್ನವನ್ನು ಕಳವು ಮಾಡಲಾಗಿದೆ ಎಂದು ಮನೆಯ ಮಾಲಕ ಸತೀಶ್ ಅವರ ಪತ್ನಿ ಸಂಧ್ಯಾ ಅವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಸತೀಶ್ ಹಾಗೂ ಅವರ ಪತ್ನಿ ಸಂಧ್ಯಾ ಬೆಳಗ್ಗೆ ಮನೆಯಿಂದ ಕೆಲಸಕ್ಕೆ ತೆರಳಿದ್ದು, ಕೆಲಸ ಮುಗಿಸಿ ಸಂಜೆ 6 ಗಂಟೆ ವೇಳೆಗೆ ಮನೆಗೆ ಬಂದು ನೋಡಿದಾಗ ಕಳವು ಪ್ರಕರಣ ಬೆಳಕಿಗೆ ಬಂದಿದೆ. ಬಂಟ್ವಾಳ ನಗರ ಠಾಣಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -