Wednesday, May 1, 2024
spot_imgspot_img
spot_imgspot_img

ಬಂಟ್ವಾಳ: ಹಿಟ್ ಅಂಡ್ ರನ್ ಕೇಸ್ : ಪಾದಚಾರಿಯ ಸಾವಿಗೆ ಕಾರಣನಾದ ಟ್ಯಾಂಕರ್ ಚಾಲಕ ಅರೆಸ್ಟ್‌

- Advertisement -G L Acharya panikkar
- Advertisement -
astr

ಬಂಟ್ವಾಳ; ಪಾದಾಚಾರಿಗೆ ಡಿಕ್ಕಿ ಹೊಡೆದು ಸಾವಿಗೆ ಕಾರಣನಾಗಿ, ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ತಮಿಳುನಾಡಿನ ಸೆಲ್ವರಾಜ್ ಎನ್ನಲಾಗಿದೆ. ಟ್ರಾಫಿಕ್ ಪೊಲೀಸರು ಈತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ತಮಿಳುನಾಡು ಮೂಲದ ಪೆರಂಬದೂರು ಜಿಲ್ಲೆಯ ವೇಪನ್ ತಾಲೂಕಿನ ಪೆರಿಯಾ ವಡಗರೈ ನಿವಾಸಿ ಸೆಲ್ವರಾಜ್ ಎಂಬಾತನನ್ನು ಆಂದ್ರಪ್ರದೇಶದದ ಕಡಪ ಎಂಬಲ್ಲಿ ಪೋಲೀಸರು ಬಂಧಿಸಿದ್ದಾರೆ.

ಆರೋಪಿ ಸೇಲ್ವರಾಜ್ ಟ್ಯಾಂಕರ್ ಚಾಲಕನಾಗಿದ್ದು, ಈತ 2017 ರಲ್ಲಿ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡು ಕೈಕಂಬದ ರಸ್ತೆ ಬದಿಯಲ್ಲಿ ನಡೆದು ಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವನಿಗೆ ಡಿಕ್ಕಿ ಹೊಡೆದ ಪರಿಣಾಮ ಆತ ಮೃತಪಟ್ಟಿದ್ದ. ಆರೋಪಿಯನ್ನು ಟ್ರಾಫಿಕ್ ಎಸ್.ಐ.ಮೂರ್ತಿ ಅವರ ಮಾರ್ಗದರ್ಶನ ದಲ್ಲಿ ಸಿಬ್ಬಂದಿಗಳಾದ ದೇವದಾಸ್ ಹಾಗೂ ರಾಜು ಅವರು ಅಂದ್ರಪ್ರದೇಶದಿಂದ ಬಂಧಿಸಿ ಕರೆತಂದಿದ್ದಾರೆ.

- Advertisement -

Related news

error: Content is protected !!