- Advertisement -
- Advertisement -
ಸುಬ್ರಹ್ಮಣ್ಯ: ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮಲಬಾರ್ ಬಸ್ಸನ್ನು ಓವರ್ಟೆಕ್ ಮಾಡುವ ಭರದಲ್ಲಿ ಬೈಕೊಂದು ಸ್ಕಿಡ್ ಆಗಿ ಬಿದ್ದ ಪರಿಣಾಮ ಓರ್ವ ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯದ ಇಂಜಾಡಿ ಎಂಬಲ್ಲಿ ನಡೆದಿದೆ.
ಕಲ್ಲುಗುಡ್ಡೆ ನಿವಾಸಿ ಪೈಂಟರ್ ರಮೇಶ್ ಮೃತಪಟ್ಟ ವ್ಯಕ್ತಿ. ಗಂಭೀರ ಗಾಯಗೊಂಡ ಗಾಯಾಳುವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.
ಶುಕ್ರವಾರ ರಾತ್ರಿ ಕೇರಳ ಸಾರಿಗೆ ಸಂಸ್ಥೆಯ ಬಸ್ಸನ್ನು ಓವರ್ಟೆಕ್ ಮಾಡುವ ಸಂದರ್ಭದಲ್ಲಿ ಬೈಕ್ ಸ್ಕಿಡ್ ಬಿದ್ದು, ಬೈಕ್ನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿದ್ದರು. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ರಮೇಶ್ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಸ್ಥಳಕ್ಕೆ ಸುಬ್ರಹ್ಮಣ್ಯ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -