Saturday, April 27, 2024
spot_imgspot_img
spot_imgspot_img

ಬಸ್​​ನಲ್ಲಿ ಅಗ್ನಿ ದುರಂತ; ಕಂಡಕ್ಟರ್​​ ಸಜೀವ ದಹನ, ಡ್ರೈವರ್ ಅಪಾಯದಿಂದ ಪಾರು

- Advertisement -G L Acharya panikkar
- Advertisement -
vtv vitla

ಬೆಂಗಳೂರು: ಬಿಎಂಟಿಸಿ ಬಸ್ಸಿ​​ನಲ್ಲಿ ಅಗ್ನಿ ದುರಂತ ಸಂಭವಿಸಿದ್ದು ಮಲಗಿದ್ದ ಕಂಡಕ್ಟರ್​​ ಸಜೀವ ದಹನವಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮುತ್ತಯ್ಯಸ್ವಾಮಿ ಮೃತಪಟ್ಟ ದುರ್ವೈವಿ(45). ಬಸ್ಸಿ​ನಲ್ಲಿ ಏಕಾಏಕಿ ಬೆಂಕಿ ದುರಂತ ಸಂಭವಿಸಿದ್ದು, ಬಸ್​ನಲ್ಲಿ ನಿದ್ದೆಗೆ ಜಾರಿದ್ದ ಕಂಡಕ್ಟರ್​ ಸುಟ್ಟು ಕರಕಲಾಗಿದ್ದಾರೆ.

ರಾತ್ರಿ ರೂಟ್​ ಮುಗಿಸಿ ಲಿಂಗಧೀರನಹಳ್ಳಿ ಬಸ್​ ನಿಲ್ದಾಣದಲ್ಲಿ ಬಸ್ಸು ನಿಂತಿದ್ದು, ಬಸ್ಸಿ​​​ನಲ್ಲೇ ಚಾಲಕ ಹಾಗೂ ನಿರ್ವಾಹಕ ಮಲಗಿದ್ದರು. ಚಾಲಕ ಬೆಳಗ್ಗೆ ಎದ್ದು ಶೌಚಾಲಯಕ್ಕೆ ಹೋದಾಗ ಈ ದುರ್ಘಟನೆ ಸಂಭವಿಸಿದೆ. ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ಕಂಡಕ್ಟರ್​ ಸುಟ್ಟು ಕರಕಲಾಗಿದ್ದಾರೆ. ಇನ್ನು ವಿಷಯ ತಿಳಿದು ಘಟನಾ ಸ್ಥಳಕ್ಕೆ ಬ್ಯಾಡರಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ನಿರ್ವಾಹಕ ಮುತ್ತಯ್ಯಸ್ವಾಮಿ ಮೂಲತಃ ಬಳ್ಳಾರಿ ಮೂಲದವರು ಎಂದು ತಿಳಿದುಬಂದಿದ್ದು, ಸದ್ಯ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

- Advertisement -

Related news

error: Content is protected !!