Friday, May 17, 2024
spot_imgspot_img
spot_imgspot_img

ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಪೊಲೀಸ್ ಅಧಿಕಾರಿ ದುರ್ಮರಣ

- Advertisement -G L Acharya panikkar
- Advertisement -
vtv vitla

ಹಾಸನ: ಹಾಸನ ಹೊರ ವಲಯದದ ಚನ್ನರಾಯ ಪಟ್ಟಣದಲ್ಲಿ ನಡೆದ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್‌ಐ ಸಾವನ್ನಪ್ಪಿದ್ದಾರೆ.

ಮಂಜುನಾಥ್(59) ಮೃತ ಪೊಲೀಸ್ ಅಧಿಕಾರಿಯಾಗಿದ್ದಾರೆ. ಪ್ರಸ್ತುತ ಚನ್ನರಾಯಪಟ್ಟಣ ಟೌನ್ ನಿವಾಸಿಯಾಗಿರುವ ಇವರು ಇತ್ತೀಚೆಗಷ್ಟೇ ಮುಂಬಡ್ತಿ ಪಡೆದು ಆರಕ್ಷಕ ಉಪ ನಿರೀಕ್ಷಕರಾಗಿ ಅರಸೀಕೆರೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಪ್ರತಿನಿತ್ಯ ಚನ್ನರಾಯಪಟ್ಟಣದಿಂದ ಅರಸೀಕೆರೆಗೆ ಪ್ರಯಾಣ ಬೆಳೆಸಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುನಾಥ್ ನಿನ್ನೆ ಶನಿವಾರ ಕರ್ತವ್ಯ ಮುಗಿಸಿ ವಾಪಸ್ ಮನೆಗೆ ಹಿಂದಿರುಗುವಾಗ ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ ಇವರನ್ನು ಕೂಡಲೇ ಚನ್ನರಾಯಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಮಂಜುನಾಥ್ 1993 ಮೇ 5ರಂದು ಪೊಲೀಸ್ ಅಧಿಕಾರಿಯಾಗಿ ನೇಮಕಗೊಂಡಿದ್ದರು. 29 ವರ್ಷಗಳ ಸೇವೆ ಸಲ್ಲಿಸಿದ ಇವರು ನಿವೃತ್ತಿ ಹಂತದಲ್ಲಿದ್ದರು. ಚನ್ನರಾಯಪಟ್ಟಣ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

vtv vitla
- Advertisement -

Related news

error: Content is protected !!