Thursday, May 9, 2024
spot_imgspot_img
spot_imgspot_img

ಬಸ್ ನಿಲ್ದಾಣದಲ್ಲಿ ಹೃದಯಾಘಾತ ಹೊಂದಿ ಅಸುನೀಗಿದ KSTRC ಅಧಿಕಾರಿ

- Advertisement -G L Acharya panikkar
- Advertisement -

ಬಸ್ ನಿಲ್ದಾಣದಲ್ಲಿ KSTRC ಅಧಿಕಾರಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. KSTRC ಬೆಂಗಳೂರು ಕೇಂದ್ರ ಘಟಕ ವ್ಯವಸ್ಥಾಪಕ ಎಚ್.ಸಿ. ತುಷಾರ್ (33) ಮೃತಪಟ್ಟ ದುರ್ದೈವಿ. ದಾವಣಗೆರೆ ಬಸ್ ನಿಲ್ದಾಣದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಸಂಸ್ಥೆಯ ಸಿಬ್ಬಂದಿಯ ಹಳೆ ಪ್ರಕರಣವೊಂದರ ವಿಚಾರಣೆ ಸಂಬಂಧ ಶಿರಸಿಗೆ ಬಂದಿದ್ದ ಅವರು, ಬೆಂಗಳೂರಿಗೆ ವಾಪಸಾಗುವಾಗ ಮಾರ್ಗ ಮಧ್ಯೆ ದಾವಣಗೆರೆಯ ಬಸ್ ನಿಲ್ದಾಣದಲ್ಲಿ ನಿಧನರಾಗಿದ್ದಾರೆ.

ತಲೆ ಸುತ್ತು ಕಾಣಿಸಿಕೊಂಡು ಆಯಾಸಗೊಂಡಿದ್ದ ಅವರನ್ನು ಬಸ್ಸಿನ ನಿರ್ವಾಹಕರು ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದ್ದಾರೆ. ಅದಾಗಲೇ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರಿಗೆ ಪತ್ನಿ ಹಾಗೂ 4 ತಿಂಗಳ ಮಗು ಇದೆ. ಮೃತದೇಹವನ್ನು ಬೆಂಗಳೂರಿಗೆ ಕಳುಹಿಸಲಾಗಿದೆ ಎಂದು ಕೆಎಸ್ಆರ್ಟಿಸಿ ಮೂಲಗಳು ತಿಳಿಸಿದೆ.

- Advertisement -

Related news

error: Content is protected !!