Monday, May 13, 2024
spot_imgspot_img
spot_imgspot_img

ಬಹುಭಾಷಾ ಹಿರಿಯ ನಟಿ ವಿನಯಪ್ರಸಾದ್ ಮನೆ ದೋಚಿದ ಖದೀಮರು

- Advertisement -G L Acharya panikkar
- Advertisement -
vtv vitla

ಬೆಂಗಳೂರು: ಬಹುಭಾಷಾ ಹಿರಿಯ ನಟಿ ವಿನಯಪ್ರಸಾದ್ ಮನೆಯ ಬಾಗಿಲು ಮುರಿದು ಖದೀಮರು ಮನೆಯಲ್ಲಿದ್ದ ನಗದು ಹಾಗೂ ಬೆಲೆಬಾಳುವ ವಸ್ತುಗಳನ್ನ ದೋಚಿಕೊಂಡು ಹೋಗಿದ್ದಾರೆ. ಈ ಸಂಬಂಧ ನಟಿ ವಿನಯ ಪ್ರಸಾದ್ ನಂದಿನಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ವಿನಯಪ್ರಸಾದ್ ಮತ್ತು ಪತಿ ಜ್ಯೋತಿಪ್ರಕಾಶ್ ಹತ್ರಿ ಅವರು ಅ.22ರಂದು ತಮ್ಮ ಸ್ವಂತ ಊರಾದ ಉಡುಪಿಗೆ ಹೋಗಿದ್ದರು.

ಅ.26ರಂದು ಸಂಜೆ 4.30ರ ಸುಮಾರಿಗೆ ಮನೆಗೆ ವಾಪಸ್ ಬಂದಾಗ ಕಳ್ಳತನ ಆಗಿರುವುದು ಗಮನಕ್ಕೆ ಬಂದಿದೆ.

ಮನೆಯ ಬಾಗಿಲು ಮುರಿದುಒಳಗೆ ಹೊಕ್ಕ ಕಳ್ಳರು, ಮನೆ ಬೀಗ ಮುರಿದು 7 ಸಾವಿರ ರೂಪಾಯಿ ನಗದು ದೋಚಿ ಪರಾರಿಯಾಗಿದ್ದಾರೆ. ಈ ಸಂಬಂಧ ನಟಿ ವಿನಯಪ್ರಸಾದ್ ದೂರು ನೀಡಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!