ಸ್ಯಾಂಡಲ್ವುಡ್ನ ಪವರ್ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. 46 ವರ್ಷದ ನಟ ತಮ್ಮ ಮನೆಯಲ್ಲಿ ಜಿಮ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದಿದ್ದರು. ಈ ವೇಳೆ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಈ ಸಂದರ್ಭದಲ್ಲಿ ನಟ ಶಿವರಾಜ್ ಕುಮಾರ್ ಅವರು ಭಜರಂಗಿ 2ಸಿನಿಮಾ ರಿಲೀಸ್ ಹಿನ್ನೆಲೆ ಥಿಯೇಟರ್ನಲ್ಲಿದ್ದರು. ಸುದ್ದಿ ಕೇಳಿದ ತಕ್ಷಣ ಶಿವರಾಜ್ಕುಮಾರ್ ಆಸ್ಪತ್ರೆಗೆ ಬಂದಿದ್ದಾರೆ.
ಸಿಎ0 ಬಸವರಾಜ್ ಬೊಮ್ಮಾಯಿ ಸೇರಿದಂತೆ ಬಹಳಷ್ಟು ಗಣ್ಯರು, ಕನ್ನಡದ ನಟ-ನಟಿಯರು ಆಸ್ಪತ್ರೆಗೆ ಆಗಮಿಸಿದ್ದು, ಬಹಳಷ್ಟು ಜನ ಅಭಿಮಾನಿಗಳು ನಟ ದಾಖಲಾಗಿದ್ದ ಆಸ್ಪತ್ರೆ ಬಳಿ ಸೇರಿದ್ದರು.ಪುನೀತ್ ರಾಜ್ಗೆ ಗುರುವಾರ ರಾತ್ರಿಯೇ ಸುಸ್ತು ಇತ್ತು ಎನ್ನಲಾಗಿದೆ. ಬೆಳಗ್ಗೆ 11 ಗಂಟೆಯ ಹೊತ್ತಿಗೆ ನಟನನ್ನು ಹತ್ತಿರದ ಕ್ಲಿನಿಕ್ಗೆ ಕರೆದೊಯ್ಯಲಾಗಿತ್ತು. ನಂತರ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.
ನಟ ಪತ್ನಿ ಗೀತಾ ಅಶ್ವಿನಿ ರೇವಂತ್ ಹಾಗೂ ಇಬ್ಬರು ಪುತ್ರಿಯರಾದ ದೃತಿ, ವಂದಿತಾ ಮತ್ತು ಕುಟುಂಬ, ಸ್ನೇಹಿತರು ಸೇರಿ ಕೋಟ್ಯಂತರ ಅಭಿಮಾನಿಗಳನ್ನು ಅಗಲಿದ್ದಾರೆ. ಪುನೀತ್ ರಾಜ್ಕುಮಾರ್ ಅವರ ಸಾವಿನ ನಂತರ ಅವರ ಮನೆಯ ಸುತ್ತ ಭದ್ರತೆಯನ್ನು ಹೆಚ್ಚಿಸಲಾಗಿದೆ. ಹಾಗೆಯೇ ವಿಕ್ರಮ್ ಆಸ್ಪತ್ರೆಯ ಸುತ್ತಲೂ ಭಾರೀ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಪುನೀತ್ ಮೃತದೇಹದ ಅಂತಿಮ ದರ್ಶನಕ್ಕೆ ಬೆಂಗಳೂರಿನ ಕಂಠೀರವ ಸ್ಟೇಡಿಯಮ್ನಲ್ಲಿ ಎಲ್ಲಾ ಸಿದ್ಧತೆಗಳು ನಡೆಯುತ್ತಿದೆ. ಕರುನಾಡಿನ ಯುವರತ್ನ ನಟ ಪುನೀತ್ ಅಗಲುವಿಕೆಯಿಂದ ಇಡೀ ಕರ್ನಾಟಕವೇ ಕಣ್ಣೀರಲ್ಲಿ ಮುಳುಗಿಹೋಗಿದ್ದು.. ಬಾನ ದಾರಿಯಲ್ಲಿ ಸೂರ್ಯ ಜಾರಿ ಹೋಗಿದ್ದಾನೆ.…