- Advertisement -
- Advertisement -
ಬೆಂಗಳೂರು: ಬಿಗ್ಬಾಸ್ ಸ್ಪರ್ಧಿ ಕಿರಿಕ್ ಕೀರ್ತಿ ಮೇಲೆ ಬಿಯರ್ ಬಾಟಲ್ ನಿಂದ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಸದಾಶಿವನಗರದ ಪಬ್ ನಲ್ಲಿ ತಡರಾತ್ರಿ ನಡೆದಿದೆ.
ಸದಾಶಿವನಗರ ಪಬ್ ಗೆ ಕಿರಿಕ್ ಕೀರ್ತಿ ತಮ್ಮ ಸ್ನೇಹಿತರೊಂದಿಗೆ ಹೋಗಿದ್ದರು. ಈ ವೇಳೆ ಪೋಟೋ ವಿಚಾರಕ್ಕೆ ಸಂಬಂಧಿಸಿದಂತೆ ಕಿರಿಕ್ ಕೀರ್ತಿ ಮೇಲೆ ವ್ಯಕ್ತಿಯೊಬ್ಬ ಬಿಯರ್ ಬಾಟಲ್ನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಈ ವೇಳೆ ಅಲ್ಲಿದ್ದ ಒಬ್ಬ ವ್ಯಕ್ತಿಯೊಬ್ಬ ಕಿರಿಕ್ ಕೀರ್ತಿ ಅವರ ಫೋಟೋ ತೆಗೆದಿದ್ದಾರೆ. ನನ್ನ ಪರ್ಮಿಷನ್ ಇಲ್ಲದೇ ಯಾಕೆ ಫೋಟೋ ತೆಗೆದುಕೊಂಡಿದ್ದೀರ ಎಂದು ಕಿರಿಕ್ ಕೀರ್ತಿ ಕೇಳಿದ್ದಾರೆ. ಹೀಗಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಕುಪಿತಗೊಂಡ ಆ ವ್ಯಕ್ತಿ ಬಿಯರ್ ಬಾಟಲ್ ನಿಂದ ಕಿರಿಕ್ ಕೀರ್ತಿ ತಲೆಗೆ ಹೊಡೆದಿದ್ದಾನೆ. ಸದ್ಯ ಗಾಯಗೊಂಡ ಕಿರಿಕ್ ಕೀರ್ತಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯ ಕುರಿತು ಸದಾಶಿವನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -