Tuesday, April 23, 2024
spot_imgspot_img
spot_imgspot_img

‘ಬಿಜೆಪಿಯ ‘ಶಿಸ್ತು’ ಖಾಕಿ ಚಡ್ಡಿ ಹಾಕಿಕೊಳ್ಳುವುದಕ್ಕೆ ಮಾತ್ರ’ – ಕಾಂಗ್ರೆಸ್ ಟ್ವೀಟ್

- Advertisement -G L Acharya panikkar
- Advertisement -

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪದೇ-ಪದೇ ಸ್ವಪಕ್ಷದ ನಾಯಕರ ವಿರುದ್ಧ ನಡೆಸುತ್ತಿರುವ್ ಟೀಕೆಗಳು ಬಿಜೆಪಿಗೆ ತೀವ್ರ ಮುಜುಗರಕ್ಕೀಡು ಮಾಡುತ್ತಿದ್ದರೆ ಕಾಂಗ್ರೆಸ್ ಮಾತ್ರ ಅದನ್ನೇ ಅಸ್ತ್ರ ಮಾಡಿಕೊಳ್ಳುತ್ತಿದೆ. ಇದೀಗ ಕೈ ಪಕ್ಷವೂ ‘ನನ್ನ ತಂಟೆಗೆ ಬಂದರೆ ಹಾವು ಬಿಡುತ್ತೇನೆ’ ಎಂದು ಯತ್ನಾಳ್ ಹೇಳಿಕೆ ಬಳಸಿಕೊಂಡು ಆಡಳಿತ ಪಕ್ಷದ ವಿರುದ್ದ ಲೇವಡಿ ಮಾಡಿದೆ.

ಕಾಂಗ್ರೆಸ್ ಕಿಟಿಕಿ ಇಣುಕುವುದರಲ್ಲೇ ನಿರತರಾಗಿದ್ದ ಬಿಜೆಪಿಗೆ ತಮ್ಮಲ್ಲಿನ ಬಿಜೆಪಿ ವರ್ಸಸ್ ಬಿಜೆಪಿ ಕದನದಲ್ಲಿ ಬಿಜೆಪಿಗರೆಲ್ಲ ಈಗ ಹಾವಾಡಿಗರಾಗಿದ್ದಾರೆ, ಅವರ ಹಾವುಗಳು ಎಲ್ಲೆಲ್ಲಿರುತ್ತವೆ, ಎಲ್ಲೆಲ್ಲಿ ಹೆಡೆ ಎತ್ತುತ್ತವೆ ಎಂಬುದು ಸ್ವತಃ ಬಿಜೆಪಿಗೇ ತಿಳಿಯುತ್ತಿಲ್ಲ! ಯತ್ನಾಳರ ಹಾವು ಯಾವುದು ಬಿಜೆಪಿ? ಭ್ರಷ್ಟಾಚಾರದ ಹಾವೇ? ಸಿಡಿ ಹಾವೇ ಎಂದು ಪ್ರಶ್ನಿಸಿದೆ.

ಶಿಸ್ತಿನ ಪಕ್ಷ ಎಂದುಕೊಳ್ಳುವ ಬಿಜೆಪಿ ಕನಿಷ್ಠ ಪಕ್ಷ ಒಬ್ಬ ಯತ್ನಳರಿಗೆ ಶಿಸ್ತು ಕ್ರಮ ಜರುಗಿಸಲು ಸಾಧ್ಯವಾಗಿಲ್ಲ ಎಂದಾದರೆ ಬಿಜೆಪಿಯ ಶಿಸ್ತು ಖಾಕಿ ಚಡ್ಡಿ ಹಾಕಿಕೊಳ್ಳುವುದಕ್ಕೆ ಮಾತ್ರ ಮೀಸಲು ಎಂಬುದು ಸ್ಪಷ್ಟ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. ಬಿಎಸ್ ಯಡಿಯೂರಪ್ಪ ವಿರುದ್ಧ ಯತ್ನಾಳ್ ಆಡುವ ಮಾತುಗಳು ಬಿ.ಎಲ್.ಸಂತೋಷ್ ಅವರದ್ದು, ಬಾಯಿ ಮಾತ್ರ ಯತ್ನಾಳ್‌ರದ್ದು ಎಂದು ಕರ್ನಾಟಕ ಕಾಂಗ್ರೆಸ್ ಆರೋಪಿಸಿದೆ.

- Advertisement -

Related news

error: Content is protected !!