- Advertisement -
- Advertisement -
ತುಮಕೂರು: ಜಿಲ್ಲೆಯ ಪಾವಗಡ ಹೊರವಲಯದ ಬಿ.ಕೆಹಳ್ಳಿ ಕ್ರಾಸ್ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಕಾರ್ಯಕರ್ತನನ್ನು ಬರ್ಬರ ಕೊಲೆ ಮಾಡಿದ ಘಟನೆ ಮಂಗಳವಾರ ಸಂಜೆ ನಡೆದಿದೆ.ಕೊಲೆಯಾದ ವ್ಯಕ್ತಿ ಪ್ರಸನ್ನ ಕುಮಾರ್ (46) ಎನ್ನಲಾಗಿದೆ.
ಇವರು ಪಾವಗಡದಿಂದ ಸ್ವಗ್ರಾಮ ಅಪ್ಪಾಜಿಹಳ್ಳಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ತಾಲೂಕು ಬಿಜೆಪಿಯಲ್ಲಿ ರೈತ ಯುವಮೋರ್ಚ ಕಾರ್ಯಕಾರಿಣಿ ಸದಸ್ಯನಾಗಿದ್ದ ಪ್ರಸನ್ನ ಕುಮಾರ್ ವಿಧಾನಪರಿಷತ್ ಚುನಾವಣೆ ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿದ್ದರು.
- Advertisement -